ರಾಘವೇಂದ್ರ ಅಡಿಗ ಎಚ್ಚೆನ್.
ಹಲವು ವರ್ಷಗಳ ಹಿಂದೆ ಝಡ್, ಹೂಂ ಅಂತೀಯಾ ಉಹೂಂ ಅಂತೀಯಾ, ಮೀಸೆ್ ಚಿಗುರಿದಾಗ ಚಿತ್ರಗಳನ್ನು ನಿರ್ದೇಶಿಸಿದ್ದ ಕೆ..ಪ್ರವೀಣ್‌ ನಾಯಕ್ ಅವರು ಬಹಳ ವರ್ಷಗಳ ನಂತರ ಆಕ್ಷನ್ ಕಟ್ ಹೇಳಿರುವ ಚಿತ್ರ ಟಕೀಲಾ, ಶ್ರೀಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ವಿದ್ಯಾರ್ಥಿ, ಜನ್‌ ಧನ್‌, ಮುನಿಯಾದಂಥ ವಿಭಿನ್ನ ಶೈಲಿಯ ಚಿತ್ರಗಳನ್ನು ನಿರ್ದೇಶಿಸಿದ ಮರಡಿಹಳ್ಳಿ ನಾಗಚಂದ್ರ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ, ಸಧ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿರವ ಈ ಚಿತ್ರದ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆಯಿತು. ಪ್ರವೀಣ್‌ ನಾಯಕ್‌ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ಕಾಣಿಸಿಕೊಂಡಿದ್ದು, ನಟಿ ನಿಖಿತಾಸ್ವಾಮಿ ನಾಯಕಿಯ ಪಾತ್ರ ನಿರ್ವಹಿಸಿದ್ದು, ಉಳಿದ ಪಾತ್ರಗಳಲ್ಲಿ ನಾಗೇಂದ್ರ ಅರಸ್, ಕೋಟೆ ಪ್ರಭಾಕರ್, ಸುಮನ್, ಜಯರಾಜ್, ಸುದ್ದಿತಾ ನಿರ್ದೇಶಕ ಪ್ರವೀಣ್‌ನಾಯಕ್‌ ಕೂಡ ಅಭಿನಯಿಸಿದ್ದಾರೆ.

493723646_4005832093065387_1345000046353522930_n
ನಿರ್ದೇಶಕ ಪ್ರವೀಣ್‌ ನಾಯಕ್‌ ಮಾತನಾಡುತ್ತ ನಾನು ಮಾನವರ ಮನಸಿನ ಬಗ್ಗೆ ತುಂಬಾ ಅಧ್ಯಯನ ಮಾಡಿದ್ದೇನೆ, ಮನಸಿನ ಸಮಸ್ಯೆಗಳನ್ನು ನೋಡ್ತಾ ನೋಡ್ತಾ ಜನರ ಮನಸ್ಥಿತಿ ನೋಡಿದಾಗ ಎಲ್ಲರಿಗೂ ಒಂದಲ್ಲ ಒಂದು ಚಿಂತೆಯಿರುತ್ತೆ ಅನ್ನೋದು ಗೊತ್ತಾಯ್ತು, ಇದನ್ನೆಲ್ಲ ನೋಡಿಗಾಗ ಎಲ್ಲವನ್ನೂ ಸೇರಿಸಿ ನಾನು ನನ್ನ ಪತ್ನಿ ಸೇರಿ ರಿಯಾಲಿಟಿಗೆ ಹತ್ತಿರವಾಗುವಂತೆ ಒಂದು ಕಥೆ ಬರೆದವು. ಜೀವನದಲ್ಲಿ ಮನುಷ್ಯನಿಗೆ ಒಂದು ಅವಕಾಶ ಸಿಗುತ್ತೆ, ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಇದ್ದರೆ ಎರಡನೇ ಅವಕಾಶ ಸಿಗದೇ ಇರಬಹುದು, ಹಾಗಾಗಿ ಸಿಕ್ಕ ಅವಕಾಶವನ್ನು ಸರಿಯಾಗಿ ಯೂಸ್ ಮಾಡಿಕೊಳ್ಳಬೇಕೆಂದು ನಮ್ಮ ಚಿತ್ರದಲ್ಲಿ ತೋರಿಸಿದ್ದೇನೆ, ತುಂಬಾ ತಡವಾಗಿ ನಿರ್ಧಾರ ತಗೊಂಡರೆ ಅದು ಕೂಡ ಉಪಯೋಗಕ್ಕೆ ಬರಲ್ಲ, ಚಟಗಳು ಅತಿಯಾದಾಗ ಏನು ಬೇಕಾದರೂ ಆಗಬಹುದು, ಡ್ರಗ್ಸ್ ಅನ್ನೋದು ಒಂದು ಸುಳೆ ಇದ್ದಹಾಗೆ, ಅದನ್ನು ಕುತೂಹಲದಿಂದ ಮುಟ್ಟಿನೋಡೋ ಪ್ರಯತ್ನ ಮಾಡದಿರಿ ಎಂದೂ ನಮ್ಮ ಚಿತ್ರ ಹೇಳುತ್ತದೆ, ಚಿತ್ರದಲ್ಲಿ 2 ಹಾಡುಗಳಿವೆ, ಲಿರಿಕ್ಸ್ ನಾನೇ ಬರದಿದ್ದೇನೆ, ಟೈಟಲ್ ಸಾಂಗ್ ಕೇಳಿದ ತಕ್ಷಣ ಇಂಪ್ರೆಸ್ ಆಯ್ತು. ಚಿತ್ರದಲ್ಲಿ ಸ್ವಲ್ಪ ಅಡಲ್ಟ್ ಕಂಟೆಂಟ್‌ ಬರುತ್ತೆ, ಹಾಗಂತ ಯಾವುದನ್ನೂ ವಲ್ಗ‌ರ್ ಆಗಿ ತೋರಿಸಿಲ್ಲ ಸತ್ಯ ಹೇಳೋ ಪ್ರಯತ್ನ ಮಾಡಿದ್ದೇನೆ. ಜೀವನದಲ್ಲಿ ನಾನು ನೋಡಿದ, ಕೇಳಿದ ಅನುಭವಗಳನ್ನೇ ಇದರಲ್ಲಿ ತೋರಿಸಿದ್ದೇನೆ. ಅಲ್ಲದೆ ನಾನು ಮೊದಲಿಂದಲೂ ಹೆಣ್ಣಿನ ಪರವಾಗೇ ಚಿತ್ರ ಮಾಡಿಕೊಂಡು ಬಂದವನು, ಸೈಕಾಲಜಿ ಜತೆಗೆ ಸ್ಪಿರಿಚುಯಾಲಿಟಿ ಬೆರೆಸಿ ಚಿತ್ರ ನಿರೂಪಿಸಲಾಗಿದೆ, ಒ೦ದು ಅರಿವು ಮೂಡಿಸುವ ಪ್ರಯತ್ನ, ವಿವೇಕದಿಂದ ಯೋಚಿಸಿ ಅನ್ನೋದು ಚಿತ್ರದ ಸಂದೇಶ, ಟೈಟಲ್ ಸಾಂಗ್ ಒಂದೇ ದಿನದಲ್ಲಿ ಹಿ೦ದೂವರೆ ಲಕ್ಷ ವೀಕ್ಷಣೆಯಾಗಿದೆ ಎಂದು ಹೇಳಿದರು.

493054367_10063348247009791_4919004528493319499_n
ನಿರ್ಮಾಪಕ ನಾಗಚಂದ್ರ, ಮಾತನಾಡಿ ಮೊದಲು ಚಿಕ್ಕದಾಗಿ ಮಾಡೋಣ ಅಂದುಕೊಂಡದ್ದು ನಂತರ ದೊಡ್ಡದಾಯ್ತು. ಅಲ್ಲದೆ ಹಲವಾರು ಕಾರಣಗಳಿಂದ ಸಿನಿಮಾ ರಿಲೀಸ್ ಆಗೋದು ಸ್ವಲ್ಪ ತಡವಾಯ್ತು.

493151018_4005838456398084_1874530621504309198_n

ಸಿನಿಮಾ ತುಂಬಾ ಚೆನ್ನಾಗಿ ಬಂದಿದ್ದು ಜಯಣ್ಣ ಅವರು ರಿಲೀಸ್ ಮಾಡುತ್ತಿದ್ದಾರೆ, ಸಮಗ್ರ ಕರ್ನಾಟಕ 150ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದರು,
ನಾಯಕನಟ ಧರ್ಮ ಕೀರ್ತಿರಾಜ್ ಮಾತನಾಡುತ್ತ ನಾನು ಈ ಸಿನಿಮಾದಲ್ಲಿ ಅಭಿನಯಿಸಲು ಕಾರಣ ನಾಗಚಂದ್ರ, ಅವರಿಗೆ ಚಿತ್ರದಿಂದ ಒಳ್ಳೆ ಹೆಸರು ಬರಲಿ, ನಮ್ಮ ತಂದೆಯವರಿಗೆ ಪ್ರವೀಣ್ ನಾಯಕ್ ಅವರಜತೆ ಈ ಸಿನಿಮಾ ಮಾಡ್ತಿದೀನಿ ಎಂದಾಗ ಮಾಡು ಅ೦ದರು, ಈ ಸಿನಿಮಾ ಮೂಲಕ ನನಗೆ ಖಂಡಿತ ಒಳ್ಳೆ ಹೆಸರು ಬರುತ್ತೆ ಎಂಬ ನಂಬಿಕೆಯಿದೆ, ಈ ಚಿತ್ರದಲ್ಲಿ ಒಬ್ಬ ಬ್ಯುಸಿನೆಸ್ ಮ್ಯಾನ್ ಪಾತ್ರ ಮಾಡಿದ್ದೇನೆ, ಆತ ಯಾವುದೋ ಒಂದು ಚಟಕ್ಕೆ ಬಿದ್ದಾಗ ಏನೆಲ್ಲ ಆಗಬಹುದೆಂದು ತೋರಿಸಲಾಗಿದೆ ಎಂದರು,
ನಾಯಕಿ ನಿಖಿತಾ ಸ್ವಾಮಿ ಮಾತನಾಡಿ ನನಗೆ ಈ ಕಥೆ ಹೇಳಿದಾಗ ತುಂಬಾ ಚಾಲೆಂಜಿಂಗ್ ಪಾತ್ರ ಎನಿಸಿತು, ಇದರಲ್ಲಿ ಹಲವಾರು ಶೇಡ್ಸ್ ಬರುತ್ತೆ, ನನ್ನ ಕೈಲಾದ ಎಫರ್ಟ್ ಹಾಕಿದ್ದೇನೆ ಎಂದರು.
ಸಂಗೀತ ನಿರ್ದೇಶಕ ರೇಣುಕುಮಾರ್, ನಟ ಸಂಕಲನಕಾರ ನಾಗೇಂದ್ರ ಅರಸ್, ಹ ನಿರ್ಮಾಪಕರಾದ ಶಂಕರ ರಾಮರೆಡ್ಡಿ, ಚನ್ನತಿಮ್ಮಯ್ಯ ಮುಂತಾದವರು ಟಕೀಲಾ ಚಿತ್ರದ ಕುರಿತಂತೆ ಮಾತನಾಡಿದರು.

493942265_10063348353676447_7199489129993847283_n
ಇನ್ನು ಟಕೀಲಾ ಚಿತ್ರಕ್ಕೆ ಬೆಂಗಳೂರು, ದೇವರಾಯನದುರ್ಗ ಹಾಗೂ ಸಕಲೇಶಪುರದ ಸುತ್ತಮುತ್ತ ಹಾಡುಗಳು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ನಡೆಸಲಾಗಿದೆ, ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಟಾಪ್‌ ಸ್ಟಾರ್ ರೇಣು ಅವರ ಸಂಗೀತ ಸಂಯೋಜನೆ, ಗಿರೀಶ್‌ ಅವರ ಸಂಕಲನ, ಪ್ರಶಾಂತ್ ಅವರ ಕಲಾನಿರ್ದೇಶನವಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ