ತೆಲುಗು ಮಾಧ್ಯಮಗಳಲ್ಲಿ ನ್ಯೂಸ್​​ ಆ್ಯಂಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸ್ವೇಚ್ಚ ವೋಟಾರ್ಕರ್ (40) ಅನುಮಾನಸ್ಪಾದವಾಗಿ ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಚಿಕ್ಕಡಪಲ್ಲಿಯ ಆರ್‌ಟಿ ಕ್ರಾಸ್‌ ರಸ್ತೆಯ ಜವಹರ್‌ನಗರದ ನಿವಾಸದಲ್ಲಿ ಈ ಘಟನೆ ನಡೆದಿದೆ.ಸ್ವೇಚ್ಚ ವೋಟಾರ್ಕರ್ ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಕೆಲ್ ನಿರ್ವಹಿಸುತ್ತಿದ್ದರು. ಪ್ರಸ್ತುತ ಅವರು ಟಿ ನ್ಯೂಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮನೆಯಲ್ಲಿನ ಫ್ಯಾನ್​​ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರು ಕಂಡು ಬಂದಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಬಳಿಕ ಅವರ ಮೃತದೇಹವನ್ನು ನಗರದ ಗಾಂಧಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಸ್ವೇಚ್ಛ ಜೀವ ಕಳೆದುಕೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇವರು ಜೀವ ಕಳೆದುಕೊಳ್ಳುವುದಕ್ಕೂ ಮುನ್ನ ಇನ್​ಸ್ಟಾದಲ್ಲಿ ಕೆಲವು ಪೋಟೋಗಳನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್​ಗೆ ಟ್ಯಾಗ್​ಲೈನ್ ಕೂಡ ಬರೆದಿದ್ದಾರೆ. ಮನಸು ಪ್ರಶಾಂತವಾಗಿ ಇದ್ರೆ ಆತ್ಮ ಮಾತನಾಡುತ್ತದೆ.- ಬುದ್ಧ ಎಂದು ಬರೆದಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ