ತೆಲುಗು ಮಾಧ್ಯಮಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸ್ವೇಚ್ಚ ವೋಟಾರ್ಕರ್ (40) ಅನುಮಾನಸ್ಪಾದವಾಗಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಚಿಕ್ಕಡಪಲ್ಲಿಯ ಆರ್ಟಿ ಕ್ರಾಸ್ ರಸ್ತೆಯ ಜವಹರ್ನಗರದ ನಿವಾಸದಲ್ಲಿ ಈ ಘಟನೆ ನಡೆದಿದೆ.ಸ್ವೇಚ್ಚ ವೋಟಾರ್ಕರ್ ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಕೆಲ್ ನಿರ್ವಹಿಸುತ್ತಿದ್ದರು. ಪ್ರಸ್ತುತ ಅವರು ಟಿ ನ್ಯೂಸ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮನೆಯಲ್ಲಿನ ಫ್ಯಾನ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರು ಕಂಡು ಬಂದಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಬಳಿಕ ಅವರ ಮೃತದೇಹವನ್ನು ನಗರದ ಗಾಂಧಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ವೇಚ್ಛ ಜೀವ ಕಳೆದುಕೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇವರು ಜೀವ ಕಳೆದುಕೊಳ್ಳುವುದಕ್ಕೂ ಮುನ್ನ ಇನ್ಸ್ಟಾದಲ್ಲಿ ಕೆಲವು ಪೋಟೋಗಳನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ಗೆ ಟ್ಯಾಗ್ಲೈನ್ ಕೂಡ ಬರೆದಿದ್ದಾರೆ. ಮನಸು ಪ್ರಶಾಂತವಾಗಿ ಇದ್ರೆ ಆತ್ಮ ಮಾತನಾಡುತ್ತದೆ.- ಬುದ್ಧ ಎಂದು ಬರೆದಿದ್ದಾರೆ.