– ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಕಿರುತೆರೆ ನಟಿ, ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್​ನಲ್ಲಿ ನಡೆದಿದೆ. ಮಂಜುಳ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಕಳೆದ ಜುಲೈ 4ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹನುಮಂತ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಮುನೇಶ್ವರ ಲೇಔಟ್​ನಲ್ಲಿ ಘಟನೆ ನಡೆದಿದೆ. ಅಮೃತಧಾರೆ, ಸೇರಿದಂತೆ ಹಲವು ಸೀರಿಯಲ್​​​​ಗಳಲ್ಲಿ ಬಣ್ಣ ಹಚ್ಚಿರುವ ಶ್ರುತಿ, 20 ವರ್ಷದ ಹಿಂದೆ ಅಮರೇಶ್  ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದು, ಹನುಮಂತ ನಗರದಲ್ಲಿ ಲೀಸ್​ಗೆ ಮನೆ ಪಡೆದು ದಂಪತಿ ವಾಸವಿದ್ದರು.

494180589_2418787511840498_1600435777367047747_n-768x768

ಇತ್ತೀಚೆಗೆ ಶ್ರುತಿ ನಡವಳಿಕೆ ಗಂಡ ಅಮರೇಶ್​​ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೂಡ ಸರಿಯಿರಲಿಲ್ಲ. ಹೀಗಾಗಿ ಗಂಡನಿಂದ ದೂರಾಗಿ ಶ್ರುತಿ ಅಣ್ಣನ ಮನೆಯಲ್ಲಿದ್ದಳು. ಕಳೆದ ಏಪ್ರಿಲ್​ನಲ್ಲಿ ಶ್ರುತಿ ಗಂಡನಿಂದ ದೂರಾಗಿದ್ದು, ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಜಗಳ ಸಹ ನಡೆದಿತ್ತು. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಗೆ ಶ್ರುತಿ ದೂರು ನೀಡಿದ್ದಳು.

WhatsApp-Image-2025-07-11-at-11.37.27-AM

ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂದಾನ ಮಾಡಿ ಗಂಡ-ಹೆಂಡತಿ ಒಂದಾಗಿದ್ದರು. ಇಬ್ಬರು ಒಂದಾದ ಮಾರನೇ ದಿನವೇ ಹೆಂಡತಿಗೆ ಪತಿ ಅಮರೇಶ್​​​ ಚಾಕು ಇರಿದಿದ್ದಾನೆ. ಕಳೆದ ಶುಕ್ರವಾರ ಮಕ್ಕಳು ಕಾಲೇಜಿಗೆ ಹೋದ ನಂತರ ಹೆಂಡತಿ ಶ್ರುತಿಗೆ ಹಲ್ಲೆ ಮಾಡಿದ್ದಾನೆ. ಪೆಪ್ಪರ್ ಸ್ಪ್ರೇ ಹೊಡೆದು ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕು ಇರಿದು ಹೆಂಡತಿಯ ಕೊಲೆಗೆ ಯತ್ನಿಸಿದ್ದಾನೆ. ಸಿನಿಮಾ ಸ್ಟೈಲ್​ನಲ್ಲಿ ತಲೆ ಕೂದಲು ಹಿಡಿದು ಗೋಡೆ ತಲೆ ಗುದ್ದಿಸಿ ಜೀವ ತೆಗೆಯಲು ಪ್ರಯತ್ನಿಸಿದ್ದಾನೆ.

WhatsApp-Image-2025-07-11-at-11.36.57-AM-768x768

With Regardsಸದ್ಯ ಘಟನೆ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರೋದಾಗಿ ಶ್ರುತಿ ದೂರು ನೀಡಿದ್ದು, ಕೊಲೆ ಯತ್ನ ಪ್ರಕರಣ ದಾಖಲಿಸಿ ಆರೋಪಿ ಅಮರೇಶ್​​​ನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಟಿ ಶ್ರುತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RAGHAVENDRA ADIGA H.N.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ