ಜಾಗೀರ್ದಾರ್*

ಕನ್ನಡದಲ್ಲಿ ‘ಜೋಶ್‍’, ‘ಸವಿಸವಿ ನೆನಪು’, ‘ಹನಿಮೂನ್‍ ಎಕ್ಸ್ ಪ್ರೆಸ್ ಮುಂತಾದ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಮತ್ತು ಖ್ಯಾತ ಉದ್ಯಮಿ ಎಸ್‍.ವಿ. ಬಾಬು, ಚಂದಾಪುರದಲ್ಲಿರುವ ಜಿ.ಪಿ.ಆರ್‍.

temple 1

ಗ್ರಾಂಡೆ ಲೇಔಟ್‍ನಲ್ಲಿ ಶ್ರೀ ಮಹಾಗಣಪತಿ, ಶ್ರೀ ವೆಂಕಟೇಶ್ವರ ಮತ್ತು ಶ್ರೀ ಲಕ್ಷ್ಮೀ, ಪದ್ಮಾವತಿ ದೇವಿ ದೇವಸ್ಥಾನವನ್ನು ಕಟ್ಟಿಸಿದ್ದು, ಈ ದೇವಸ್ಥಾನದ ಪ್ರಾಣ ಪ್ರತಿಷ್ಠಪನಾ ಮಹೋತ್ಸವ ಇತ್ತೀಚೆಗೆ ನಡೆದಿದೆ. ಸುಮಾರು ಎಂಟು ಸಾವಿರ ಚದುರಡಿ ವಿಸ್ತೀರ್ಣದಲ್ಲಿ ಈ ಭವ್ಯ ದೇವಸ್ಥಾನದಲ್ಲಿ ಕಟ್ಟಲಾಗಿದೆ. ಆಯೋಧ್ಯೆಯ ಶ್ರೀ ರಾಮ ಮಂದಿರ ದೇವಸ್ಥಾನದ ರಾಮ್‍ ಲಲ್ಲಾ ಮೂರ್ತಿಯನ್ನು ಕೆತ್ತಿರುವ ಮೈಸೂರಿನ ಅರುಣ್‍ ಯೋಗಿರಾಜ್ ಅವರ ತಂಡದವರು, ಈ ದೇವಸ್ಥಾನದ ಮೂರ್ತಿಗಳನ್ನು ಕೆತ್ತಿದ್ದಾರೆ. ಮೂರು ದಿನಗಳ ಕಾಲ ಬಹಳ ವಿಜೃಂಭಣೆಯಿಂದ ನಡೆದ ದೇವಸ್ಥಾನ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾಗಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ. ನರಸಿಂಹಲು, ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಕಾರ್ಯದರ್ಶಿ ಡಿ.ಕೆ. ರಾಮಕೃಷ್ಣ, ನಟಿಯರಾದ ಪ್ರಿಯಾ ಹಾಸನ್‍, ಕಾರುಣ್ಯ ರಾಮ್‍ ಮುಂತಾದವರು ಹಾಜರಿದ್ದರು.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ