ಜಾಗೀರ್ದಾರ್*

ಇತ್ತೀಚೆಗೆ ಕೆಂದಾವರೆ ಪುಸ್ತಕವನ್ನು ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅನಾವರಣ ಮಾಡಿದರು. ನಿರುತ ಪಬ್ಲಿಕೇಷನ್ ಪುಸ್ತಕ ಪ್ರಕಟಿಸಿದೆ. ಆದಿತ್ಯ ವಿನೋದ್ ಅವರು ಬರೆದ ಈ ಪುಸ್ತಕ ಮಕ್ಕಳ ಕಳ್ಳತನದ ಸುತ್ತ ಸಾಗುವ ಕಥೆಯನ್ನು ಒಳಗೊಂಡಿದೆ.

*ತಾರಾ ಬಳಗದ ಯಾರೆಲ್ಲಾ ಇದ್ದಾರೆ?*

ಕೆಂದಾವರೆ ಪುಸ್ತಕದ ಟೈಟಲ್ ನ್ನೇ ಸಿನಿಮಾಗೆ ಇಡಲಾಗಿದೆ. ಪನ್ನಗ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಆದಿತ್ಯ ವಿನೋದ್ ನಟಿಸುತ್ತಿದ್ದು, ನಾಯಕಿಯಾಗಿ ದಿಯಾ ಸಾಥ್ ಕೊಡುತ್ತಿದ್ದಾರೆ. ಉಳಿದಂತೆ ಅಕ್ಷತಾ ಶ್ರೀಧರ್ ಶಾಸ್ತ್ರೀ, ಪ್ರಕಾಶ್ ತುಮ್ಮಿನಾಡು, ಶ್ರವಣ್ ಜಗದೀಶ್, ಪುನೀತ್ ಓಂಕಾರ್, ವಿಶ್ವಾಸ್ ಕೃಷ್ಣ ತಾರಾಬಳಗದಲ್ಲಿದ್ದಾರೆ.

books 1

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವುದರ ಜೊತೆಗೆ ಆದಿತ್ಯ ವಿನೋದ್ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದು, ಅರುಣ್ ಕುಮಾರ್ ಕ್ಯಾಮೆರಾ ಹಿಡಿಯಲಿದ್ದಾರೆ. ಈಗಾಗಲೇ 50%ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಹುಬ್ಬಳ್ಳಿ, ಧಾರವಾಡ, ಸವದತ್ತಿ, ಸಾಗರ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗುತ್ತಿದೆ. ಮುಂದಿನ ವರ್ಷದ ಆರಂಭದಲ್ಲಿಯೇ ಕೆಂದಾವರೆ ಸಿನಿಮಾ ಪ್ರೇಕ್ಷಕರ ಎದುರು ಬರಲಿದೆ. ಅಪ್ರಮೇಯ ಪ್ರೊಡಕ್ಷನ್ ಬ್ಯಾನರ್ ನಡಿ ಈ ಚಿತ್ರ ತಯಾರಾಗುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ