ತಮ್ಮ ಇಳಿ ವಯಸ್ಸಲ್ಲೂ ಸೂಪರ್ ಹಿಟ್ ಸಿನಿಮಾಗಳನ್ನು ಕೊಡುತ್ತಿರುವ ಸೂಪರ್ ಸ್ಟಾರ್ ರಜನೀಕಾಂತ್ ಈಗ ಸಿನಿಮಾಗಳಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿದ್ದು, ಪ್ರಸ್ತುತ ಆಧ್ಯಾತ್ಮಿಕ ಪ್ರಯಾಣ ಆರಂಭಿಸಿದ್ದಾರೆ.

ರಜನಿಕಾಂತ್ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿದ್ದಾರೆ. ಆಗ ಅವರು ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದ್ದರು ಹಾಗೂ ಗಂಗಾ ಆರತಿಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.ಅವರ ಆಧ್ಯಾತ್ಮಿಕ ಪ್ರವಾಸದ ಅನೇಕ ಫೋಟೋಗಳು ಸಾಮಾಜಿಕ ತಾಣದಲ್ಲಿ ಕಾಣಿಸಿಕೊಂಡಿವೆ. ಒಂದು ಫೋಟೋದಲ್ಲಿ ರಜನಿಕಾಂತ್ ಬಿಳಿ ಬಟ್ಟೆಗಳನ್ನು ಧರಿಸಿ, ರಸ್ತೆಬದಿಯ ಕಲ್ಲಿನ (ತಡೆಗೋಡೆ) ಮೇಲೆ ಇರಿಸಲಾದ ತಟ್ಟೆಯಲ್ಲಿ ಬಡಿಸಿದ ಆಹಾರ ಸೇವಿಸುತ್ತಿದ್ದಾರೆ.

ಇನ್ನೊಂದು ಫೋಟೋದಲ್ಲಿ ಆಶ್ರಮವೊಂದರಲ್ಲಿ ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದೆ. ನಂತರ ರಜನಿಕಾಂತ್ ಒಬ್ಬ ಪುರೋಹಿತರ ಪಕ್ಕದಲ್ಲಿ ನಿಂತು ಗೌರವ ಸಲ್ಲಿಸುತ್ತಿರುವ ಚಿತ್ರ ಕೂಡ ಇದೆ. ರಜನಿಕಾಂತ್ ಅವರ ಸರಳತೆಗೆ ಮಾರುಹೋಗಿರುವ ಅವರ ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ತಲೈವಾ ನಡೆಯನ್ನು ಕಂಡು ಪ್ರಶಂಸೆಪೂರವೇ ಹರಿದುಬರುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ