– ರಾಘವೇಂದ್ರ ಅಡಿಗ ಎಚ್ಚೆನ್.

ರಾಜರಾಣಿ, ತೇರಿ, ಬಿಗಿಲ್, ಜವಾನ್ ಖ್ಯಾತಿಯ ಅಲ್ಲು ಅರ್ಜುನ್ ಮುಂದಿನ ಚಿತ್ರದ ನಿರ್ದೇಶಕ ಅಟ್ಲಿ ಕುಮಾರ್​ರಿಂದ ವರ್ಲ್ಡ್ ಪಿಕಲ್‌ಬಾಲ್ ಲೀಗ್ ಬೆಂಗಳೂರು ಒಪನ್ 2025ನಲ್ಲಿ ಅಟ್ಲಿ ಮಾಲಿಕತ್ವದ ಬೆಂಗಳೂರು ಜವಾನ್ಸ್ ತಂಡ ಆಡುತ್ತಿದೆ. ಈ ಕಾರ್ಯಕ್ರಮವನ್ನ ಇಂದು ಬೆಂಗಳೂರಿನ ಪಿಕಲ್ ಬಾಲ್ ಕ್ಲಬ್​ನಲ್ಲಿ‌ ಚಾಲನೆ ನೀಡಲಾಯಿತು.
ಕಳೆದ ಬಾರಿ ಭಾರತದ ಮೊಟ್ಟ ಮೊದಲ ಪಿಕಲ್ ಬಾಲ್ ಲೀಗ್ ಅನ್ನು ಕರ್ನಾಟಕ ಸ್ಟೇಟ್ ಪಿಕಲ್ ಬಾಲ್ ಅಸೋಸಿಯೇಷನ್ ಸಾರಥ್ಯದಲ್ಲಿ ಯಶಸ್ವಿಯಾಗಿ ಮಾಡಲಾಗಿತ್ತು. ಇದೀಗ ಎರಡನೇ ಪಿಕಲ್ ಬಾಲ್ ಲೀಗ್ ಆವೃತ್ತಿಗೆ ಚಾಲನೆ ನೀಡಲಾಗಿದೆ. ಅದ್ರಂತೆ ಅಕ್ಟೋಬರ್ 10ರಿಂದ 12 ರವರೆಗೆ ರೋಚಕ ಪಿಕಲ್ ಬಾಲ್ ಪಂದ್ಯಾವಳಿಗಳು ನಡೆಯಲಿವೆ.

WhatsApp-Image-2025-10-10-at-4.49.48-PM

ಈ ವಿಚಾರವಾಗಿ ಬೆಂಗಳೂರಿಗೆ ಆಗಮಿಸಿದ ತಮಿಳು ಸಿನಿಮಾರಂಗದ ಹೆಸರಾಂತ ನಿರ್ದೇಶಕ ಜವಾನ್ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ ಅಟ್ಲಿ ಕುಮಾರ್ ಬೆಂಗಳೂರು ಜವಾನ್ಸ್ ಹೆಸರಿನ ತಂಡವನ್ನು ಖರೀದಿ ಮಾಡಿದ್ದಾರೆ. ಕಳೆದ ವರ್ಷ ಆರ್.ಸಿ ಬಿ ತಂಡ ಐಪಿಎಲ್ ಟ್ರೋಫಿ ಗೆದ್ದತ್ತು. ಬೆಂಗಳೂರು ಜವಾನ್ಸ್ ಕೂಡ ಚಾಂಪಿಯನ್ಸ್ ಆಗಿತ್ತು.
ಬೆಂಗಳೂರು ಒಪನ್ 2025 ವರ್ಲ್ಡ್ ಪಿಕಲ್ ಬಾಲ್ ಲೀಗ ಉದ್ಘಾಟಿಸಿ, ಸ್ಫರ್ಧಾಳುಗಳ ಜತೆ ಸ್ನೇಹಪೂರ್ವಕ ಮ್ಯಾಚ್ ಆಡಿದ ‌ಅಟ್ಲಿ ಕುಮಾರ್,‌ ನಾನು ಆರ್.ಸಿ .ಬಿ ಫ್ಯಾನ್. ಬೆಂಗಳೂರು ತಂಡ ಕಳೆದ ಬಾರಿ ಐಪಿಎಲ್ ಕಪ್ ಗೆದ್ದಿತ್ತು. ಅದರಂತೆ ನಮ್ಮ ತಂಡ ಬೆಂಗಳೂರು ಜವಾನ್ಸ್ ತಂಡ ಕೂಡ ಗೆದ್ದಿತ್ತು. ಬೆಂಗಳೂರು ಸಿಟಿ ಅಂದ್ರೆ ನಂಗೆ ತುಂಬಾ ಇಷ್ಟ. ಇಲ್ಲಿನ ಸಿನಿಮಾ ನಟರಾದ ಯಶ್, ರಿಷಬ್ ಶೆಟ್ಟಿ ಮುಂತಾದವರ ಜೊತೆಗೆ ನನಗೆ ಉತ್ತಮ ಸ್ನೇಹವಿದೆ. ಎಲ್ಲರೂ ಅದ್ಭುತವಾಗಿ ಕೆಲಸ ಮಾಡ್ತಾ ಇದ್ದಾರೆ.

WhatsApp-Image-2025-10-10-at-4.49.52-PM

ಕಾಂತಾರ ಅಧ್ಯಾಯ 1 ರ ಬಗ್ಗೆ ಅಟ್ಲಿ ಮಾತನಾಡಿ, ‘‘ಕಾಂತಾರ ನಿಜಕ್ಕೂ ಅದ್ಭುತ ಸಿನಿಮಾ‘‘ ನಾನು ನೋಡಿ ಬೆರಗಾಗಿದ್ದೇನೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.
ಮೂಲತಃ ತಮಿಳು ನಾಡಿನವರಾಗಿದ್ದರು ಅಟ್ಲಿಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಅಂದ್ರೆ ಸಖತ್ ಭಕ್ತಿ ಅಂತೆ. ಆಗಾಗ ಕುಕ್ಕೆ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆಯುತ್ತಿನಿ ಎಂದರು. ಜವಾನ್ ಸಿನಿಮಾ ಸೂಪರ್ ಹಿಟ್ ಆದ ಕಾರಣ ನಾನು ಖರೀದಿ ಮಾಡಿರುವ ಪಿಕಲ್ ಬಾಲ್ ತಂಡಕ್ಕೆ ಬೆಂಗಳೂರು ಜವಾನ್ಸ್ ಎಂದು ಹೆಸರಿಟ್ಟಿರುವೆ ಎಂದಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ