– ರಾಘವೇಂದ್ರ ಅಡಿಗ ಎಚ್ಚೆನ್.
ಬಿಗ್ ಬಾಸ್ ಕನ್ನಡ ಸೀಸನ್ 12’ ರಲ್ಲಿ ಯಾರೂ ಊಹಿಸದ ಘಟನೆಗಳು ಸಾಕಷ್ಟು ನಡೆಯುತ್ತಿವೆ. ಮೂರನೇ ವಾರದಲ್ಲೇ ಬಿಗ್ ಬಾಸ್ ಫಿನಾಲೆ ನಡೆಯಿತು. ಇದರಲ್ಲಿ ವಿನ್ ಆದ ಸುಧಿಗೆ ಮುಂಬರುವ ಯಾವುದೇ ಒಂದು ನಾಮಿನೇಷನ್ನಿಂದ ಬಚಾವ್ ಆಗುವ ಅಧಿಕಾರ ನೀಡಲಾಯಿತು. ಇನ್ನು, ಒಬ್ಬರನ್ನು ವಾರದ ಮಧ್ಯದಲ್ಲಿ ಹಾಗೂ ಮತ್ತಿಬ್ಬರನ್ನು ವಾರಾಂತ್ಯದಲ್ಲಿ ಎಲಿಮಿನೇಟ್ ಮಾಡಲಾಯಿತು. ಈಗ ಮೂವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿರುವಾಗಲೇ ಬಿಗ್ ಬಾಸ್ನಿಂದ ಮಲ್ಲಮ್ಮ ಹೊರ ನಡೆದಿದ್ದಾರೆ ಎಂಬ ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಇದನ್ನು ಕೇಳಿ ಫ್ಯಾನ್ಸ್ ಕೂಡ ಬೇಸರ ಮಾಡಿಕೊಂಡಿದ್ದಾರೆ.
ಮಲ್ಲಮ್ಮ ಅವರಿಗೆ ವಯಸ್ಸಾಗಿದೆ. ಆದಾಗ್ಯೂ ಬಿಗ್ ಬಾಸ್ ಮನೆಯಲ್ಲಿ ಎಲ್ಲರಿಗೂ ಠಕ್ಕರ್ ಕೊಡೋ ರೀತಿಯಲ್ಲಿ ಆಟ ಆಡುತ್ತಿದ್ದರು. ಕೆಲವು ನಿಯಮಗಳು, ಆಟದ ವಿಚಾರಗಳು ಅವರಿಗೆ ಅರ್ಥ ಆಗದೇ ಇದ್ದರು ಅವರಿಗೆ ಸೂಕ್ಷ್ಮತೆಗಳು ತಿಳಿಯುತ್ತಿತ್ತು. ಅವರು ಅನೇಕರ ಫೇವರಿಟ್ ಸ್ಪರ್ಧಿ ಆಗಿದ್ದರು. ಆದರೆ, ಈಗ ವೈಯಕ್ತಿಕ ಕಾರಣಗಳಿಂದ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಗುರುವಾರದ ಎಪಿಸೋಡ್ನಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ.
ಮಲ್ಲಮ್ಮ ಕುಟುಂಬದವರೊಬ್ಬರಿಗೆ ಮಗು ಜನಿಸಿದೆ ಎನ್ನಲಾಗಿದೆ. ಈ ಖುಷಿಯ ಕ್ಷಣದಲ್ಲಿ ಅವರು ಭಾಗಿ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ, ಅವರು ಆಟ ತೊರೆದು ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲರಿಗೂ ಮನೆಯವರ ನೆನಪು ಕಾಡುತ್ತಾ ಇತ್ತು. ಆದರೆ ಮಲ್ಲಮ್ಮ ಮಾತ್ರ ಗಟ್ಟಿತನ ತೋರಿಸುತ್ತಿದ್ದರು. ಭಾವನಾತ್ಮಕ ವಿಚಾರಕ್ಕೆ ನಡುಗಿದವರಲ್ಲ. ಅವರು ಎಂದಿಗೂ ಮನೆಯನ್ನು ಹಾಗೂ ಮನೆಯವರನ್ನು ನೆನಪಿಸಿಕೊಂಡು ಅತ್ತವರಲ್ಲ. ಈಗ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗುವ ನಿರ್ಧಾರ ತೆಗೆದುಕೊಂಡಿದ್ದಾರೆ.





