ರಾಜಮೌಳಿ-ಮಹೇಶ್ ಬಾಬು ಅವರ ಹೊಸ ಚಿತ್ರ ‘ವಾರಣಾಸಿ’ 2027ಕ್ಕೆ ಬಿಡುಗಡೆಯಾಗಲಿದ್ದು, ಅದ್ದೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದ ಸಿಟ್ಟಿಗೆದ್ದ ರಾಜಮೌಳಿ ಹನುಮಂತನ ಬಗ್ಗೆ ಆಡಿದ ಮಾತುಗಳು ಇದೀಗ ಭಾರಿ ವಿವಾದ ಸೃಷ್ಟಿಸಿವೆ.

ರಾಜಮೌಳಿ ಹಾಗೂ ಮಹೇಶ್ ಬಾಬು ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದ್ದು, ‘ವಾರಾಣಸಿ’ ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.

ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಟೈಟಲ್ ಅನಾವರಣಗೊಂಡಿದ್ದು, ನಿರ್ಮಾಪಕರು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದಾರೆ. ಈ ವೇದಿಕೆ ಮೇಲೆ ರಾಜಮೌಳಿ ಆಡಿದ ಮಾತುಗಳು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ರಾಜಮೌಳಿ ಕ್ಷಮೆ ಕೇಳಬೇಕು ಎಂಬ ಆಗ್ರಹವೂ ಕೇಳಿ ಬರುತ್ತಿದೆ.

ತಾಂತ್ರಿಕ ಸಮಸ್ಯೆ: ‘ವಾರಣಾಸಿ’ ಟೈಟಲ್ ಅನಾವರಣಕ್ಕಾಗಿ ದೊಡ್ಡ ಸ್ಕ್ರೀನ್ ಹಾಕಲಾಗಿತ್ತು. ಆದರೆ, ತಾಂತ್ರಿಕ ದೋಷ ಕಾಣಿಸಿಕೊಂಡಿತು. ಇದರಿಂದ ಕೆಲವು ಹೊತ್ತು ಟೈಟಲ್ ಟೀಸರ್​  ಅನಾವರಣ ಸಾಧ್ಯವಾಗಿರಲಿಲ್ಲ. ಕೊನೆಗೆ ಟೀಸರ್​ನ ತೋರಿಸಲಾಯಿತು. ವೇದಿಕೆ ಮೇಲೆ ರಾಜಮೌಳಿ ಅವರು ನೆರೆದಿದ್ದ ಅಭಿಮಾನಿಗಳ ಬಳಿ ಕ್ಷಮೆ ಕೇಳಿದರು.

‘ನನಗೆ ದೇವರ ಮೇಲೆ ಅಂತಹ ನಂಬಿಕೆ ಏನೂ ಇಲ್ಲ. ಹನುಮಂತನ ಆಶೀರ್ವಾದ ನನ್ನ ಮೇಲೆ ಇರುತ್ತದೆ ಎಂದು ನನ್ನ ತಂದೆ ವಿಜಯೇಂದ್ರ ಪ್ರಸಾದ್ ಹೇಳಿದ್ದರು. ಈ ತಾಂತ್ರಿಕ ಸಮಸ್ಯೆ ಆದಾಗ ನನಗೆ ಸಿಟ್ಟೇ ಬಂತು. ಈ ರೀತಿಯಾ ಅವನು (ಹನುಮಂತ) ನನಗೆ ಸಹಾಯ ಮಾಡೋದು’ ಎಂದು ರಾಜಮೌಳಿ ಪ್ರಶ್ನೆ ಮಾಡಿದ್ದಾರೆ.

‘ನನ್ನ ಪತ್ನಿ ಹನುಮಂತನ ದೊಡ್ಡ ಭಕ್ತೆ. ಗೆಳೆಯ ಎನ್ನುವಂತೆ ಅವಳು ಹನುಮಂತನ ಬಳಿ ಮಾತನಾಡುತ್ತಿರುತ್ತಾಳೆ. ನನಗೆ ಅವಳ ಮೇಲೂ ಕೋಪ ಬಂತು. ನನ್ನ ಪತ್ನಿಯ ಹನುಮಂತ ಈ ಬಾರಿ ಸಹಾಯ ಮಾಡುತ್ತಾನಾ ನೋಡೋಣ’ ಎಂದಿದ್ದರು ರಾಜಮೌಳಿ.

ಕ್ಷಮೆಗೆ ಪಟ್ಟು: ರಾಜಮೌಳಿ ಹೇಳಿಕೆಯನ್ನು ಅನೇಕರು ಖಂಡಿಸಿದ್ದು, ಅವರು ಮಾಡಿಕೊಂಡ ತಾಂತ್ರಿಕ ಸಮಸ್ಯೆಗೆ ಹನುಮಂತನ ದೋಷಿಸೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ‘ಅವರು ಹಿಂದಿನ ದಿನವೇ ಈ ಬಗ್ಗೆ ಪರಿಶೀಲಿಸಿಕೊಳ್ಳಬೇಕಿತ್ತು’ ಎಂದು ಹೇಳಿದ್ದಾರೆ. ಮತ್ತೆ ಕೆಲವರು ರಾಜಮೌಳಿ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಬಿಲಿಗೇಟ್ಸ್​ ಕೂಡ ತಾಂತ್ರಿಕ ಸಮಸ್ಯೆ ಎದುರಿಸಿದ್ದಾರೆ. ಆಗ ಅವರು ಏಸು ಕ್ರಿಸ್ತನ ದೂಷಿಸಲಿಲ್ಲ ಎಂದು ಹಲವರು ಹೇಳಿದರೆ, ಇನ್ನೂ ಕೆಲವರು ಸಿನಿಮಾ ಬ್ಯಾನ್ ಮಾಡುವಂತೆ ಆಗ್ರಹಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ