– ರಾಘವೇಂದ್ರ ಅಡಿಗ ಎಚ್ಚೆನ್.
ಗುಮ್ಮಡಿ ನರಸಯ್ಯ ಅವರ ಮನೆಗೆ ನಟ ಶಿವರಾಜ್ಕಮಾರ್ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಗೀತಾ ಶಿವರಾಜ್ಕುಮಾರ್ ಕೂಡ ಸಾಥ್ ನೀಡಿದರು. ಈ ಸಂದರ್ಭದ ಫೋಟೋ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದೆ.

ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ. ಶನಿವಾರ (ಡಿಸೆಂಬರ್ 6) ‘ಗುಮ್ಮಡಿ ನರಸಯ್ಯ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ಅವರ ಕುಟುಂಬವನ್ನು ಶಿವಣ್ಣ ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರು ಸಾಕಷ್ಟು ಖ್ಯಾತಿ ಹೊಂದಿದ್ದಾರೆ. 5 ಬಾರಿ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. ತಮ್ಮ ಸರಳ ವ್ಯಕ್ತಿತ್ವ ಕಾರಣದಿಂದ ಅವರು ಎಲ್ಲರಿಗೂ ಮಾದರಿ ಆಗಿದ್ದರು.
ಶಿವರಾಜ್ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಲಿರುವ ಮೊದಲ ತೆಲುಗು ಸಿನಿಮಾ ಇದು. ಹಾಗಾಗಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.





