ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿ ಕೊಟ್ಟಿರುತ್ತಾನೆ. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಸದಾ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.

ಕೆಎಸ್‌ಡಿಎ, ಕೆಎಸ್‌ಡಿಸಿ ಮತ್ತು ಅಸಿಸ್‌ಟೆಕ್ ಫೌಂಡೇಶನ್ ಶನಿವಾರ ಬೆಂಗಳೂರಿನ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ವಿಶೇಷ ಚೇತನರಿಗಾಗಿ ಆಯೋಜಿಸಿದ್ದ “ಜಾಬ್ ಹಬ್ಬ”  ಉದ್ಘಾಟಿಸಿ ಅವರು ಮಾತನಾಡಿದರು.ಈ ಕಾರ್ಯಕ್ರಮವು ಅಂಗವಿಕಲ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಪಾಲುದಾರರು ಮತ್ತು ನಾಗರಿಕ ಸಮಾಜವನ್ನು ಒಟ್ಟುಗೂಡಿಸಿದೆ. ಕರ್ನಾಟಕದಲ್ಲಿ 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದಾರೆ ಎಂಬ ಮಾಹಿತಿ ಇದೆ. ಇವರಿಗೆ ಶಿಕ್ಷಣ ಮತ್ತು ಉದ್ಯೋಗ ಎರಡರಲ್ಲೂ ಅವಕಾಶಗಳನ್ನು ಒದಗಿಸಲು ನಮ್ಮ ಸರ್ಕಾರವು ಹೊಸ ನೀತಿ ರೂಪಿಸಿ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಸಚಿವರು ವಿವರಿಸಿದರು.

ಕಾರ್ಪೊರೇಟ್ ಕ್ಷೇತ್ರದಲ್ಲಿ ವಿಶೇಷ ಚೇತನರ ಸಂಖ್ಯೆ ಕಡಿಮೆ ಇದೆ. ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆ ತರುವ ತುರ್ತು ಅವಶ್ಯಕತೆಯಿದೆ ಎಂದು ಹೇಳಿದರು.ವಿಶೇಷ ಚೇತನರಿಗೆ ಖಾಸಗಿ ವಲಯದಲ್ಲಿ 5% ಉದ್ಯೋಗ ಮೀಸಲಾತಿ ಕಲ್ಪಿಸಲು ಸರ್ಕಾರ ಈಗಾಗಲೇ ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಮಸೂದೆ 2025″ ವಿಧೇಯಕವನ್ನು ಜಾರಿಗೆ ತಂದಿದೆ. ಇದು ದೇಶದಲ್ಲಿ ಅತ್ಯಂತ ಪರಿಣಾಮಕಾರಿ ಕಾನೂನಾಗಿದೆ. ಇದಲ್ಲದೇ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–32 ಅನ್ನೂ ನಾವು ರೂಪಿಸಿದ್ದೇವೆ. ಕೌಶಲ್ಯ, ಕೈಗಾರಿಕಾ ಪಾಲುದಾರಿಕೆ, ಮೂಲಸೌಕರ್ಯ ಮತ್ತು ತಂತ್ರಜ್ಞಾನಕ್ಕೆ ಪೂರಕವಾದ ತರಬೇತಿ ನೀಡಲು ನಮ್ಮ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆಯು (CMKKY) ವಿಶೇಷ ಚೇತನ ವ್ಯಕ್ತಿಗಳಿಗೆ ತರಬೇತಿ ನೀಡಲು ಅವಕಾಶ ಒದಗಿಸಿದೆ ಎಂದರು.

ರಾಜ್ಯದಾದ್ಯಂತ ಹೆಚ್ಚಿನ ಅಭ್ಯರ್ಥಿಗಳು ಕೌಶಲ್ಯ ಮತ್ತು ನಿರ್ದಿಷ್ಟ ತರಬೇತಿ ಪಡೆಯಲು ಅವಕಾಶ ಒದಗಿಸಲು ನಾವು ಬದ್ಧವಾಗಿದ್ದೇವೆ. ಎಐ ತಂತ್ರಜ್ಞಾನ, ವರ್ಚುವಲ್ ಉದ್ಯೋಗ ಅವಕಾಶಗಳನ್ನು ಒದಗಿಸಲು ಅಸಿಸ್‌ಟೆಕ್‌  ಫೌಂಡೇಶನ್‌ ಸಹಯೋಗ ಅಗತ್ಯ ಎಂದು ಸಚಿವರು ಇದೇ ಸಂದರ್ಭದಲ್ಲಿ ಘೋಷಿಸಿದರು.ಈ ರೀತಿಯ ನೇಮಕಾತಿಯು “ಸ್ಮಾರ್ಟ್ ಎಕನಾಮಿಕ್ಸ್‌ ಆಗಿದೆ ಹೊರತು ಚಾರಿಟಿ ರೀತಿಯಲ್ಲ. ಉದ್ಯೋಗದಾತರು ವೈವಿಧ್ಯತೆ, ನಾವೀನ್ಯತೆಗೆ ಹೆಚ್ಚು ಆದ್ಯತೆ ನೀಡಬೇಕು. ಈ ಜಾಬ್‌ ಹಬ್ಬದ ಮೂಲಕ ಕರ್ನಾಟಕದಿಂದ  ಕೆಲವು ಯಶಸ್ವಿ ಕಥೆಗಳು ಹೊರಹೊಮ್ಮಲಿ ಎಂದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ