– ರಾಘವೇಂದ್ರ ಅಡಿಗ ಎಚ್ಚೆನ್.

ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಬೆಳಗಿದ ಬುದ್ದ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ ಅವರು ಹೇಳಿದರು.

ನಗರದ ನಯನ ಸಭಾಂಗಣದಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಬುದ್ದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಹಾಗೂ 22ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

IMG-20260525-WA0007

ಬುದ್ದ ಶಾಂತಿಯ ಮೂಲಕವೇ ಎಲ್ಲರ ಮನಸ್ಸನ್ನು ಗೆದ್ದು ಜಗತ್ತಿಗೆ ಜ್ಯೋತಿ ಬೆಳಗಿನ ಜ್ಞಾನಿಯಾದ ಅದರಂತೆ ಬುದ್ದನ ಮಾರ್ಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೂಡ ಶೋಷಿತರ ಪರವಾಗಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಮಹಾನ್ ಚೇತನರಾದರು. ಈ ಇಬ್ಬರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಅವಶ್ಯಕವಾಗಿದೆ ಎಂದರು.

IMG-20260525-WA0006

ಉಪ ಪೋಲಿಸ್ ಆಯುಕ್ತ ಡಾ.ಹೆಚ್.ಮಂಜುನಾಥ್ ಬಾಬು ಮಾತನಾಡಿ, ನಾವೆಲ್ಲರೂ ಕಾನೂನಿನ ಅಡಿಯಲ್ಲಿ ಬದುಕುತ್ತಿದ್ದೇವೆ ಎಂದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾರಣ. ಬುದ್ದನ ಶಾಂತಿ ಮಾರ್ಗ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ ನಾವೆಲ್ಲರೂ ಮಾದರಿಯಾಗಿ ತೆಗೆದುಕೊಳ್ಳಬೇಕು. ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟಲು ಪೋಷಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.

IMG-20260525-WA0005

ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ, ಡಿಸಿಪಿ ಡಾ.ಹೆಚ್.ಡಾ.ಮಂಜುನಾಥ್ ಬಾಬು ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಿ ಸತ್ಕಾರ ಮಾಡಲಾಯಿತು.

ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಗಂಡಸಿ ಸದಾನಂದಸ್ವಾಮಿ, ಸುಬ್ರಹ್ಮಣ್ಯ ಹಂಡಿಗೆ, ಶಿವರಾಜ್ ಮೌರ್ಯ ಅವರಿಗೆ ಮಾಧ್ಯಮ ಸೇವಾ ರತ್ನ ಪ್ರಶಸ್ತಿ ಹಾಗೂ ಸಂಜೀವಿನಿ ರೇಖಿ ಹೀಲಿಂಗ್ ಸೆಂಟರ್ ನ ಡಾ.ವಿ.ಭರಣಿ ರಾಜು ಅವರಿಗೆ ವಿಶಿಷ್ಟ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

IMG-20260525-WA0008

ಪುಟಾಣಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂಧರ್ಭದಲ್ಲಿ ಇದು ನಿಮ್ಮ ವಾಹಿನಿಯ ಪ್ರದಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ಎಸ್, ಇವೆಂಟ್ ಕೊ- ಅರ್ಡಿನೆಟರ್ ಚಂದ್ರಿಕಾ ಬಿ.ವಿ.ಇದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ