– ರಾಘವೇಂದ್ರ ಅಡಿಗ ಎಚ್ಚೆನ್.

ದೇಶದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ 2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಪ್ರದಾನ ಮಾಡಿದರು.ಒಟ್ಟು 66 ಸಾಧಕರಿಗೆ ಈ ಹಂತದಲ್ಲಿ ಗೌರವ ನೀಡಲಾಗಿದ್ದು, ಕಲಾ, ಕ್ರೀಡೆ, ಸಾಹಿತ್ಯ ಹಾಗೂ ಸಾರ್ವಜನಿಕ ಸೇವೆ ಸೇರಿದಂತೆ ಹಲವು ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದ್ದು, ಅವರ ಪರವಾಗಿ ಪತ್ನಿ ಹೇಮಾ ಮಾಲಿನಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಶಾಸ್ತ್ರೀಯ ಸಂಗೀತ ಕ್ಷೇತ್ರದ ಹಿರಿಯ ಪಿಟೀಲು ವಾದಕಿ N. ರಾಜಮ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಮಹಾರಾಷ್ಟ್ರದ ಮಾಜಿ ರಾಜ್ಯಪಾಲ Bhagat Singh Koshyari ಮತ್ತು ಖ್ಯಾತ ಬ್ಯಾಂಕರ್ Uday Kotak ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು.

padmashree 1

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ Harmanpreet Kaur ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಿನಿಮಾ ಕ್ಷೇತ್ರದ ನಟ Prosenjit Chatterjee ಕೂಡ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾದರು.

ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳು ಘೋಷಿಸಲ್ಪಟ್ಟಿದ್ದು, ಮೊದಲ ಹಂತದಲ್ಲಿ 2 ಪದ್ಮವಿಭೂಷಣ, 6 ಪದ್ಮಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ. ಉಳಿದ ಪ್ರಶಸ್ತಿಗಳನ್ನು ಮುಂದಿನ ಹಂತದಲ್ಲಿ ನೀಡಲಾಗುವುದು ಎಂದು ತಿಳಿಸಲಾಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ