– ರಾಘವೇಂದ್ರ ಅಡಿಗ ಎಚ್ಚೆನ್.

ಬಿಗ್ ಬಾಸ್ ಸೀಸನ್ 12ರ ವಿಜೇತ ಹಾಸ್ಯನಟ ನಟರಾಜ್ ಅಲಿಯಾಸ್ ಗಿಲ್ಲಿ ನಟ ಅವರು ಇದೀಗ ತಾವು ಬೆಂಗಳೂರಿಗೆ ಬಂದಿದ್ದ ಕನಸನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. ಸಿನಿಮಾದಲ್ಲಿ ನಾಯಕ ನಟನಾಗಿ ಅವಕಾಶ ಸಿಕ್ಕಿದ್ದು, ಇದೇ ಜೂ.21ರಂದು ಗಿಲ್ಲಿ ಟವರ ಜನ್ಮದಿನದಂದೇ ಸಿನಿಮಾ ಮುಹೂರ್ತ ಇಟ್ಟುಕೊಳ್ಳಲಾಗಿದೆ.
ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಪ್ರೊಡಕ್ಷನ್ ಸಂಸ್ಥೆಯಾದ ಹಾಗೂ ವಿವಿಧ ಭಾಷೆಗಳಲ್ಲಿ ನೂರಾರು ಕೋಟಿ ಬಜೆಟ್ ಹಾಕಿ ಸಿನಿಮಾ ನಿರ್ಮಾಣ ಮಾಡುವ ಕೆವಿಎನ್ ಪ್ರೊಡಕ್ಷನ್ ಗಿಲ್ಲಿ ನಟನೆಯ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಔಟ್ ಅಂಡ್ ಔಟ್ ಕಾಮಿಡಿ ಮತ್ತು ಎಂಟರ್‌ಟೇನರ್ ಸಿನಿಮಾಗಳಿಗೆ ಬ್ರ್ಯಾಂಡ್ ಆಗಿರುವ, ಈ ಹಿಂದೆ ಚಿಕ್ಕಣ್ಣ ನಟನೆಯ ‘ಬೊಂಬೆ ಮಿಠಾಯಿ’, ‘ಡಬಲ್ ಇಂಜಿನ್’, ʻಫಾರೆಸ್ಟ್‌ʼ ಹಾಗೂ ಸತೀಶ್‌ ನೀನಾಸಂ ನಟನೆಯ ‘ಬ್ರಹ್ಮಚಾರಿ’ಯಂತಹ ಚಿತ್ರಗಳನ್ನು ನೀಡಿದ್ದ ನಿರ್ದೇಶಕ ಚಂದ್ರಮೋಹನ್ ಈ ಹೊಸ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಮಂಡ್ಯ ಶೈಲಿಯ ವಿಶಿಷ್ಟ ಹಾಸ್ಯದ ಮೂಲಕವೇ ಮನೆಮಾತಾಗಿರುವ ಗಿಲ್ಲಿ ನಟ ಹಾಗೂ ನಿರ್ದೇಶಕ ಚಂದ್ರಮೋಹನ್ ಕಾಂಬಿನೇಷನ್‌ನಲ್ಲಿ ಮೂಡಿಬರಲಿರುವ ಈ ಚಿತ್ರವು ಪಕ್ಕಾ ಕಾಮಿಡಿ ಎಂಟರ್‌ಟೇನರ್ ಆಗಿರಲಿದೆಯಂತೆ.
ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ನಾಯಕಿ ಯಾರು ಎಂಬ ಸಂಪೂರ್ಣ ವಿವರಗಳನ್ನು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಲಿದೆ. ಬಿಗ್ ಬಾಸ್ ಗೆದ್ದ ನಂತರ ಗಿಲ್ಲಿ ನಟನಿಗೆ ಸಿಕ್ಕಿರುವ ಈ ಬಂಪರ್ ಆಫರ್ ಕಂಡು ಅವರ ಅಭಿಮಾನಿ ಬಳಗ ಫುಲ್ ಖುಷ್ ಆಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ