ಸರಸ್ವತಿ ಜಾಗೀರ್ದಾರ್*

ಪಿ.ಸಿ.ಶೇಖರ್ ನಿರ್ದೇಶನದ,

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ಅವರು ಬರೆದಿರುವ "ನೀ ಬರುವೆ ಅಂತ ನಾ ಕಾದು ಕುಂತ" ಎಂಬ ಸುಂದರ ಪ್ರೇಮಗೀತೆ ಇತ್ತೀಚೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು "ಸರಿಗಮಪ" ಖ್ಯಾತಿಯ ಪೃಥ್ವಿ ಭಟ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡು ಜನಮನಸೂರೆಗೊಳ್ಳುತ್ತಿದ್ದು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಕುಲ್ ಗೌಡ ಹಾಗೂ ಮಾನ್ವಿತ ಹರೀಶ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

BAD 1

ನಾಯಕನ ಬರುವಿಕೆಗಾಗಿ ಕಾದು ಕುಳಿತ್ತಿರುವ ನಾಯಕಿ, ಕಾಯುವಿಕೆಯ ಆ ಸಮಯದಲ್ಲಿ ಏನೆಲ್ಲಾ ಕಲ್ಪಿಸಿಕೊಳ್ಳುತ್ತಾಳೆ ಎಂಬುದನ್ನು ಈ ಹಾಡಿನ ಮೂಲಕ ತೋರಿಸಲಾಗಿದೆ ಎಂದು ತಿಳಿಸಿರುವ ನಿರ್ದೇಶಕ ಪಿ.ಸಿ.ಶೇಖರ್, ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ ಎನ್ನುತ್ತಾರೆ.

"BAD" ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಿತ್ರೀಕರಣ ಮುಕ್ತಾಯವಾಗಿದೆ. ಟೀಸರ್ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರದ ಹಾಡುಗಳು ಸಹ ಜನಪ್ರಿಯವಾಗುತ್ತಿದೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ "BAD" ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ "BAD" ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.

"ಪ್ರೀತಿಯ ರಾಯಭಾರಿ" ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ "BAD" ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ