ಸರಸ್ವತಿ ಜಾಗೀರ್ದಾರ್*

ಮಾಯೆಯೊಂದು ಎಂಥೆಂಥವರನ್ನೋ ಚಿತ್ರರಂಗಕ್ಕೆ ಕರೆತಂದಿರುತ್ತದೆ. ಅದೇ ರೀತಿ, ತಾವಾಯ್ತು ತಮ್ಮ ಕ್ರಿಕೆಟ್‌ ಆಟವಾಯ್ತು ಎಂದಷ್ಟೇ ಇದ್ದ ಫ್ರೊಫೆಷನಲ್‌ ಕ್ರಿಕೆಟರ್‌ ಭಾಸಿ ಭಾಸ್ಕರ್‌, ಸದ್ಯ ಕನ್ನಡ ಮಾತ್ರವಲ್ಲ, ಬಾಲಿವುಡ್‌ನ ಸ್ಟಾರ್‌ ನಟ, ನಿರ್ದೇಶಕರ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಪಕ್ಕದ ಮಲಯಾಳಂನಲ್ಲಿಯೂ ಮೋಹನ್‌ ಲಾಲ್‌ ಅವರ ಜತೆಗೆ ವೃಷಭ ಹೆಸರಿನ ಸಿನಿಮಾ ಮಾಡಿದ್ದಾರೆ. ಇನ್ನೇನು ಬಹುತೇಕ ಕೆಲಸ ಮುಗಿಸಿಕೊಂಡಿರುವ ಪ್ಯಾನ್‌ ಇಂಡಿಯಾ ಮಟ್ಟದ ವೃಷಭ ಸಿನಿಮಾ ಇದೇ ವರ್ಷ ತೆರೆಗೆ ಬರುವ ಸಾಧ್ಯತೆಗಳಿವೆ. ಇದೀಗ ಇದೇ ಚಿತ್ರದ ಕೆಲಸ ಮಾಡಿರುವ ಭಾಸಿ ಭಾಸ್ಕರ್‌, ತಮ್ಮ ಕಿರು ಸಿನಿಮಾ ಯಾನದ ಬಗ್ಗೆ ಮಾತನಾಡಿದ್ದಾರೆ.

"ನಾನು ಸಿನಿಮಾಕ್ಕೆ ಬರುತ್ತೇನೆ ಅಂತ ಕನಸಲ್ಲೂ ಅಂದುಕೊಂಡಿರಲಿಲ್ಲ. ನನಗೆ ಸಿನಿಮಾ ರಂಗದ ನಂಟು ಬಂದಿದ್ದು ಸ್ನೇಹಲೋಕದಿಂದ. ವಿಷ್ಣು ಸರ್‌ ನಮ್ಮ ಆಫೀಸ್‌ಗೆ ಬಂದಾಗ, ಈ ಸ್ನೇಹಲೋಕ ಶುರುವಾಯ್ತು. ನಾನು, ವಿಷ್ಣುವರ್ಧನ್‌ ಸರ್, ಶಿವರಾಮಣ್ಣ, ಅಭಿಜಿತ್‌, ಶೋಭರಾಜ್‌, ವಿಜಯಕುಮಾರ್‌ ಜತೆಗಿನ ನಂಟು ಮುಂದುವರಿಯಿತು. ಜತೆ ಜತೆಗೆ ಕ್ರಿಕಿಟ್‌ ಸಹ ಆಡ್ತಿದ್ವಿ. ಹಾಗೆ ಆಟ ಆಡುವಾಗ, ರಂಗಭೂಮಿ ಹಿನ್ನೆಲೆಯ ನಿರ್ದೇಶಕರೊಬ್ಬರು ನನ್ನ ಭೇಟಿಯಾದರು. ನಮ್ಮ ಡ್ರಾಮಾದಲ್ಲಿ ಒಂದು ಪಾತ್ರ ಇದೆ ಮಾಡ್ತೀರಾ? ಎಂದು ಕೇಳಿದರು. ನನಗೆ ಡ್ರಾಮಾ ಬಗ್ಗೆ ಏನೂ ಗೊತ್ತಿಲ್ಲ ಸರ್‌ ಅಂದೆ. ಒಂದೂವರೆ ಎರಡು ತಿಂಗಳು ಟ್ರೇನಿಂಗ್‌ ಕೊಟ್ಟರು. ಹೇಗೆ ಮಾತನಾಡಬೇಕು, ಯಾವ ರೀತಿ ಎಕ್ಸ್‌ಪ್ರೆಷನ್‌ ಕೊಡಬೇಕು ಎಲ್ಲವನ್ನೂ ಹೇಳಿಕೊಟ್ಟರು. ಅಲ್ಲಿಂದ ನಟನೆ ಕೆಲಸ ಶುರುವಾಯ್ತು.

"ಒಂದು ದಿನ ಆವತ್ತು ನನ್ನ ಡ್ರಾಮಾವನ್ನು ಎಸ್‌ ನಾರಾಯಣ್‌ ಬಂದು ನೋಡಿದ್ದರು. ಶೋ ಮುಗಿದ ಬಳಿಕ ವೀರಪರಂಪರೆ ಸಿನಿಮಾದಲ್ಲಿ ಒಂದು ಪಾತ್ರ ಇದೆ ಮಾಡು ಎಂದು ಹೇಳಿದರು. ಅಂಬರೀಶ್‌ ಮತ್ತು ಸುದೀಪ್‌ ಅವರ ಸಿನಿಮಾ ಅದು. ದೊಡ್ಡ ವ್ಯಕ್ತಿಗಳು ಕೇಳಿದಾಗ, ಇಲ್ಲ ಅಂತ ಹೇಳಲು ಆಗಲ್ಲ. ಬೇರೆ ಏನನ್ನೂ ಯೋಚಿಸದೇ ನಾನು ಸಿನಿಮಾ ಒಪ್ಪಿಕೊಂಡೆ. ವೀರಪರಂಪರೆ ಚಿತ್ರದ ಬಳಿಕ "ವಾರೆವ್ವಾ" ಸಿನಿಮಾ ಮಾಡಿದೆ. "ಈ ಕ್ಷಣ" ಅನ್ನೋ ಸಿನಿಮಾ ಮಾಡಿದೆ. ಅಲ್ಲಿಂದ ಪೂರ್ಣ ಪ್ರಮಾಣದ ಸಿನಿಮಾ ನಟನೆ ಶುರುವಾಯ್ತು. ಜತೆಗೆ ಸಿಸಿಎಲ್‌ ಸಹ ಶುರುವಾಯ್ತು. ಸುದೀಪ್‌ ಮತ್ತು ಅಶೋಕ್‌ ಖೇಣಿ ಅವರಿಂದ ಚಾನ್ಸ್‌ ಸಿಕ್ತು. ಸಿಸಿಎಲ್‌ನಲ್ಲಿ ಕೊನೇ ಬಾಲ್‌ ಸಿಕ್ಸ್‌ ಬಾರಿಸಿ ತಂಡ ಗೆಲ್ಲಿಸಿದೆ. ಇಂದಿಗೂ ಅದನ್ನು ಜನ ನೆನಪಿಟ್ಟುಕೊಂಡಿದ್ದಾರೆ.

"ಟ್ರೇನಿಂಗ್‌ ಸಲುವಾಗಿಯೇ ಮುಂಬೈನಲ್ಲಿ ಹಿಂದಿ, ಉರ್ದು ನಾಟಕಗಳಲ್ಲಿ ಅಭಿನಯಿಸಿದೆ. ಒಂದು ದಿನ ಆ ನಾಟಕವನ್ನು ನಿರ್ದೇಶಕ ನೀರಜ್‌ ಪಾಂಡೆ ಅವರು ನೋಡಿದ್ದರು. ಅವರಿಂದ ಎಂ.ಎಸ್‌. ಧೋನಿ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಅದಾದ ಮೇಲೆ ಅಕ್ಷಯ್‌ ಕುಮಾ̧ರ್‌ ತಾಪ್ಸೀ ಪನ್ನು ಅವರ ಜತೆಗೆ ನಾಮ್‌ ಶಬಾನಾ ಸಿನಿಮಾದಲ್ಲಿಯೂ ನಟಿಸಿದೆ. ನಿಧಾನಕ್ಕೆ ಹೆಚ್ಚೆಚ್ಚು ಆಫರ್‌ ಸಿಗುತ್ತ ಹೋದವು. ಹೀಗಿರುವಾಗಲೇ ಸಲಗ ಸಿನಿಮಾದಲ್ಲಿ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡೆ. ಆ ಪಾತ್ರ ನೀಡಿದ ದುನಿಯಾ ವಿಜಯ್‌ ಅವರಿಗೆ ನಾನು ಥ್ಯಾಂಕ್ಸ್‌ ಹೇಳಲೇ ಬೇಕು. ಆ ಚಿತ್ರದ ಪಾತ್ರವೂ ನನ್ನ ಕೆರಿಯರ್‌ಗೂ ಹೊಸ ಮೈಲೇಜ್‌ ತಂದುಕೊಟ್ಟಿತು" ಎಂಬುದು ಭಾಸಿ ಭಾಸ್ಕರ್‌ ಮಾತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ