ಹಲವು ಬಾರಿ ನೋಟಿಸ್ ಕೊಟ್ಟರೂ ಕೇರ್ ಮಾಡಿಲ್ಲ. ಹಾಗಾಗಿ ಬಿಗ್ ಬಾಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಗೂ ಬಿಗ್ ಬಾಸ್ ಕಾರ್ಯಕ್ರಮಕ್ಕೂ ಸಂಬಂಧ ಇಲ್ಲ. ನಿಯಮದ ಪ್ರಕಾರ ಸಿಎಫ್ಇ, ಸಿಎಫ್ಓ ಪಡೆಯಬೇಕಾಗಿತ್ತು. ಈ ಬಗ್ಗೆ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ಅವರು ಕೇರ್ ಮಾಡಿರಲಿಲ್ಲ. ಹೀಗಾಗಿ ಕಠಿಣ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.bigbossಇದರಲ್ಲಿ ಯಾವುದೇ ಅನ್ಯ ಉದ್ದೇಶ ಇಲ್ಲ. ಬಿಸ್ ಬಾಸ್ ಕಾರ್ಯಕ್ರಮ ಆಯೋಜನೆ ಮಾಡುವವರು ಉಚ್ಚ ನ್ಯಾಯಾಲಯಕ್ಕೆ ಹೋಗಿದ್ದಾರೆ. ಅದರ ತೀರ್ಪು ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮಾಲೀಕರು ಅರ್ಜಿಯನ್ನಾದರೂ ಹಾಕಿದ್ದಾರಾ? ಅನುಮತಿ ಪಡೆದು ನಡೆಸಲಿ ಯಾರು ಬೇಡ ಅಂತಾರೆ? ನಟ್ಟು ಬೋಲ್ಟು ಟೀಕೆಗೂ ಇದಕ್ಕೂ ಸಂಬಂಧ ಇಲ್ಲ. ಡಿಸಿಎಂ ಡಿ.ಕೆ ಶಿವಕುಮಾರ್ ಮಾತಿಗೆ ತಳುಕು ಹಾಕುವ ಅವಶ್ಯಕತೆ ಇಲ್ಲ. ಇದರಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಬಿಗ್ ಬಾಸ್ ಮನೆಗೆ ಬೀಗ ಹಾಕಿರುವ ವಿಷಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಾನು ಈ ಬಗ್ಗೆ ವಿಚಾರಿಸಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಸೀಜ್ ಮಾಡಿದ್ದಾರೆ. ಡಿ.ಸಿ ಅವರ ಜೊತೆ ಮಾತಾಡಿದ್ದೇನೆ, ಏನು ಮಾಡೋಕೆ ಸಾಧ್ಯ ಅದನ್ನು ಮಾಡೋದಕ್ಕೆ ಹೇಳಿದ್ದೇನೆ ಎಂದಿದ್ದಾರೆ.

ಅಲ್ಲಿ ಉದ್ಯೋಗ ಅವಕಾಶ ಹಾಗೂ ಮನರಂಜನೆ ಮುಖ್ಯ. ನಾನೇ ಹೋಗಿ ಬಿಗ್ ಬಾಸ್ ಕಾರ್ಯಕ್ರಮ ಉದ್ಘಾಟಿಸಿದ್ದೇನೆ. ನನ್ನ ಬಗ್ಗೆ ಮಾತಾಡ್ಲಿ ಬಿಡಿ. ಮಾತನಾಡದೆ ಇದ್ದರೆ ನಿದ್ದೆನೂ ಬರಲ್ಲ ಶಕ್ತಿನೂ ಬರಲ್ಲ ಎಂದು ತಿರುಗೇಟು ನೀಡಿದರು.

ಏನಾದರೂ ತಪ್ಪಾಗಿದ್ದರೆ ಸರಿಪಡಿಸಿಕೊಂಡು ಒಂದು ಅವಕಾಶ ಮಾಡಿ ಕೊಡ್ಲಿ ಅಂತ ಹೇಳಿದ್ದೇನೆ. ಇದು ನನ್ನ ಸಲಹೆಯಾಗಿದೆ. ಇಷ್ಟು ಮಾತ್ರ ಗೊತ್ತು,ನಾನು ಟಿವಿಯಲ್ಲಿ ನೋಡಿ ಗೊತ್ತಾಯಿತು ಎಂದರು.

ಖಾಸಗಿಯವರು ಬಂಡವಾಳ ಹೂಡಿಕೆ ಮಾಡಿರ್ತಾರೆ. ಸಣ್ಣ ಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಳ್ಳಿ ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ