ಸೂಪರ್ ಸ್ಟಾರ್‌  ರಜನಿಕಾಂತ್ ಅವರ 'ಕೂಲಿ' ಸಿನಿಮಾದಲ್ಲಿ ರಿಯಲ್ ಸ್ಟಾರ್‌ಉಪೇಂದ್ರ ಕೂಡ ನಟಿಸಿದ್ದಾರೆ. 'ಕೂಲಿ' ಸಿನಿಮಾದಲ್ಲಿ ಉಪ್ಪಿ ಕಲೀಶ ಎಂಬ ಪಾತ್ರ ನಿರ್ವಹಿಸಿದ್ದು, ಅವರನ್ನು ತೆರೆಮೇಲೆ ನೋಡಲು ಫ್ಯಾನ್ಸ್ ಎದುರು ಕಾತುರರಾಗಿದ್ದಾರೆ.

ಸದ್ಯ ಉಪೇಂದ್ರ ಅವರ ಬಗ್ಗೆ ರಜನಿಕಾಂತ್ ಹೊಗಳಿ ಮಾತನಾಡಿರುವ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ಲೋಕೇಶ್ ಕನಕರಾಜ್ ನಿರ್ದೇಶನದ 'ಕೂಲಿ' ಸಿನಿಮಾದಲ್ಲಿ ತಲೈವಾ ರಜನಿಕಾಂತ್ ಜೊತೆಗೆ ಉಪೇಂದ್ರ ನಟಿಸುತ್ತಿದ್ದಾರೆ. ಈ ಸಿನಿಮಾದ ಆಡಿಯೋ ಇತ್ತೀಚೆಗೆ ಚೆನ್ನೈನಲ್ಲಿ ನಡೆದಿತ್ತು. ಆಗ ರಜನಿ ಅವರು ಉಪ್ಪಿ ಅವರನ್ನು ಮನಸಾರೆ ಹೊಗಳುವ ಮೂಲಕ  'ಓಂ' ಚಿತ್ರವನ್ನು ನೆನಪಿಸಿಕೊಂಡಿದ್ದಾರೆ.

ರಜನಿ ಹೇಳಿದ್ದೇನು?: 'ಕೂಲಿ' ಚಿತ್ರದಲ್ಲಿ ಉಪೇಂದ್ರ ಅವರು ಕಲೀಶ ಪಾತ್ರ ಮಾಡಿದ್ದಾರೆ. ಆ ಬಗ್ಗೆ ಮಾತನಾಡುತ್ತಾ ರಜನಿಕಾಂತ್, "ನಮ್ಮ ಸಿನಿಮಾದಲ್ಲಿ ಉಪೇಂದ್ರ ಒಂದು ಪಾತ್ರ ಮಾಡಿದ್ದಾರೆ. ಭಾರತದ ಅತ್ಯಂತ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ಅವರೇ ದೊಡ್ಡ ಸ್ಪೂರ್ತಿ. ಮಲಯಾಳಂ, ಹಿಂದಿ, ತೆಲುಗು, ತಮಿಳು ಎಲ್ಲಾ ಭಾಷೆಯವರಿಗೂ ಉಪೇಂದ್ರ ಸ್ಪೂರ್ತಿ. ಅಂತಹ ದೊಡ್ಡ ಡೈರೆಕ್ಟರ್ ಅವರು. ಅವರಿಗೆ ನಟನಾಗಬೇಕು ಎಂದು ಇಷ್ಟವಿರಲಿಲ್ಲ. ಅವರು ಮೂಲತಃ ನಿರ್ದೇಶಕರು" ಎಂದು ಹೇಳಿದ್ದಾರೆ."ಅವರು 'ಓಂ' ಅಂತ ಒಂದು ಸಿನಿಮಾವನ್ನು ಶಿವರಾಜ್‌ಕುಮಾರ್‌ಗೆ ಮಾಡಿದ್ದಾರೆ. ನನಗೆ ಇಲ್ಲಿ 'ಬಾಷಾ' ಸಿನಿಮಾ ಹೇಗೋ, ಅಲ್ಲಿ (ಕರ್ನಾಟಕದಲ್ಲಿ) ಅದಕ್ಕಿಂತಲೂ 10 ಪಟ್ಟು ದೊಡ್ಡ ಸಿನಿಮಾ 'ಓಂ'. ಆದಾದ ಮೇಲೆ ಅವರು ಮಾಡಿರುವ ಒಂದೊಂದು ಪಾತ್ರಗಳು ಡಿಫರೆಂಟ್‌. ಈಗ ಲೋಕೇಶ್ ಕನಕರಾಜ್ ನಾನ್ ಲೀನಿಯರ್ ಅಂತೇನೋ ಟೆಕ್ನಿಕ್ ಬಳಸುತ್ತಾರಲ್ವಾ? ಅದನ್ನು ಉಪೇಂದ್ರ ಅಂದೇ ಮಾಡಿದ್ದಾರೆ" ಎಂದು ರಜನಿಕಾಂತ್ ಹೇಳಿದ್ದಾರೆ.

"ತುಂಬಾ ಓದಿಕೊಂಡಿದ್ದಾರೆ. ಜನರ ಮೇಲೆ ಸಾಕಷ್ಟು ಪ್ರೀತಿ ತೋರಿಸುತ್ತಾರೆ. ಅವರು ನಮ್ಮ ಸಿನಿಮಾದಲ್ಲಿ ನಟಿಸಿದ್ದಕ್ಕೆ ನನಗಂಗೂ ತುಂಬಾ ಖುಷಿಯಾಗಿದ್ದೇನೆ" ಎಂದು ರಜನಿಕಾಂತ್ ಹೇಳಿದ್ದಾರೆ.

ರಜನಿಕಾಂತ್ ಅವರ ಬಗ್ಗೆ ಖುಷಿಯಿಂದ ಮಾತನಾಡಿರುವ ಉಪೇಂದ್ರ, "ನಾನು ಈಗ ಹೇಳುವುದು ಅತಿಶಯೋಕ್ತಿ ಎನಿಸಬಹುದು. ಆದರೆ ನಾನು ನಿಜವಾಗಿಯೂ ಹೇಳುತ್ತಿದ್ದೇನೆ, ನಾನು 25 ವರ್ಷದ ಹಿಂದೆ ತಲೈವಾ ಅವರನ್ನು ಭೇಟಿಯಾದೆ. ಅದು ನನಗೆ ಯಾವತ್ತೂ ಮರೆಯಲಾಗದಂತಹ ಕ್ಷಣ. ಅಂದಿನಿಂದ ದ್ರೋಣಾಚಾರ್ಯರನ್ನು ಏಕಲವ್ಯ ಹೇಗೆ ಫಾಲೋ ಮಾಡುತ್ತಾನೋ, ಹಾಗೇ ನಾನು ಫಾಲೋ ಮಾಡಿದ್ದೇನೆ" ಎಂದು ಹೇಳಿದ್ದಾರೆ.

"ಅಂದು ದ್ರೋಣಾಚಾರ್ಯ ಮೊದಲ ಬಾರಿಗೆ ಏಕಲವ್ಯನನ್ನು ಭೇಟಿಯಾದಾಗ ಬೆರಳು ಕೇಳಿದ್ದ. ಆದರೆ ಈ ದ್ರೋಣಾಚಾರ್ಯ (ರಜನಿಕಾಂತ್) ಈ ಏಕಲವ್ಯನನ್ನು (ಉಪೇಂದ್ರ) ಬೆರಳು ಹಿಡಿದುಕೊಂಡು ಕೂಲಿ ಅನ್ನೋ ಪ್ರಪಂಚಕ್ಕೆ ಕರೆದುಕೊಂಡು ಬಂದಿದ್ದಾರೆ. ಆ ಪ್ರಪಂಚದಲ್ಲಿ ನಾಗಾರ್ಜುನ, ಆಮೀರ್ ಖಾನ್, ಸತ್ಯರಾಜ್.. ಅಬ್ಬಬ್ಬಾ.. ನಾನಿದನ್ನು ನಿರೀಕ್ಷೆ ಮಾಡಿರಲಿಲ್ಲ. ಎಲ್ಲಾ ಸ್ಟಾರ್‌ಗಳಿಗೂ ಅಭಿಮಾನಿಗಳು ಇರುತ್ತಾರೆ. ಆ ಎಲ್ಲಾ ಸ್ಟಾರ್‌ಗಳು ನಿಮಗೆ (ರಜನಿಕಾಂತ್‌) ಅಭಿಮಾನಿಗಳಾಗಿರುತ್ತಾರೆ. 'ಕೂಲಿ' ಅನ್ನೋದು ಹಬ್ಬ. ನಾವೆಲ್ಲರೂ ಆಗಸ್ಟ್ 14ರಂದು ಸೆಲೆಬ್ರೇಷನ್ ಮಾಡೋಣ" ಎಂದು ಹೇಳಿದ್ದಾರೆ ಉಪೇಂದ್ರ.
ಸನ್‌ ಪಿಕ್ಚರ್ಸ್ ನಿರ್ಮಿಸಿರುವ 'ಕೂಲಿ' ಸಿನಿಮಾವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ಶ್ರುತಿ ಹಾಸನ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದು, ಆಗಸ್ಟ್​ 14ರಂದು ಬಹುಭಾಷೆಗಳಲ್ಲಿ "ಕೂಲಿ" ಸಿನಿಮಾ ರಿಲೀಸ್​ ಆಗಲಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ