- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ(94) ಅವರು ಇಂದು ವಿಧಿವಶರಾಗಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೈರಪ್ಪ ಅವರು, ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಮೆಮೋರಿಯಲ್ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ 2.38ಕ್ಕೆ​ ಕಾರ್ಡಿಯಾಕ್ ಆರೆಸ್ಟ್ ಆಗಿ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಸಾಹಿತ್ಯದ ಸೇವೆಯಲ್ಲಿ ಸದಾ ಮುಂದಿರುತ್ತಿದ್ದ ಭೈರಪ್ಪ ಅವರ ಬರಹಗಳನ್ನು ಓದುವವರ ಸಾಲಿನಲ್ಲಿ ಹೊಸ ಯುಗದ ನವ ಯುವಕರೇ ಹೆಚ್ಚಾಗಿದ್ದರು. ಅವರ ಪ್ರಸಿದ್ಧ ಕೃತಿಗಳನ್ನು ಈಗಲೂ ಹಲವು ಯುವಜನರಿಗೆ ಮೊದಲ ಓದಾಗಿ ಓದುವಂತೆ ಪ್ರೇರಣೆ ನೀಡುವವರ ಸಂಖ್ಯೆಗೇನೂ ಕಡಿಮೆಯಾಗಿಲ್ಲ. ಇದೀಗ ಕನ್ನಡ ಸಾಹಿತ್ಯ ಲೋಕದ ಬರವಣಿಗೆಯಲ್ಲಿ ಶಾಶ್ವರ ಪೂರ್ಣ ವಿರಾಮ ಹಾಕಿದ್ದಾರೆ.

ಎಸ್. ಎಲ್. ಭೈರಪ್ಪ ಅವರು ಕನ್ನಡದ ಪ್ರಮುಖ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿಂತಕರಾಗಿದ್ದರು. ಅವರ ಕಾದಂಬರಿಗಳು ಭಾರತೀಯ ಭಾಷೆಗಳಿಗೆ ಅನುವಾದಗೊಂಡಿದ್ದು, ವ್ಯಾಪಕ ಜನಪ್ರಿಯತೆ ಗಳಿಸಿವೆ. ಅವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಸ್ಥಾಪಿಸಿದ್ದಾರೆ.

ಪ್ರಶಸ್ತಿಗಳು :

ಪದ್ಮಭೂಷಣ (2023): ಭಾರತ ಸರ್ಕಾರದಿಂದ ನೀಡಲಾದ ದೊಡ್ಡ ಗೌರವ.

ಸರಸ್ವತೀ ಸಮ್ಮಾನ್ (2010): ತಮ್ಮ ‘ಮಂದ್ರ’ ಕಾದಂಬರಿಗೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975): ತಮ್ಮ ‘ದಾಟು’ ಕಾದಂಬರಿಗೆ.

ಸಾಹಿತ್ಯ ಅಕಾಡೆಮಿ ಫೆಲೋಶಿಪ್ (2015): ಅತ್ಯುನ್ನತ ಗೌರವ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ