- ರಾಘವೇಂದ್ರ ಅಡಿಗ ಎಚ್ಚೆನ್.

ನಂಬಿಕೆ ಕಳೆದುಕೊಂಡಾಗ ನಮಗೆ ದೇವರ ನೆನಪಾಗುತ್ತದೆ  ದೇವರು ನನ್ನ ಜೀವನದಲ್ಲಿ ಎಷ್ಟೆಲ್ಲ ಆಟ ಆಡಿದನಲ್ಲ ಎನಿಸಬಹುದು. ಆಗೆಲ್ಲ ನಾವು ದೇವನೊಬ್ಬ ಜಾದೂಗಾರ ಎಂದುಕೊಳ್ಳುತ್ತೇವೆ. ಈಗ ಖಟ್ವಾಂಗ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಇದೇ ಹೆಸರನ್ನಿಟ್ಟು ಸಿನಿಮಾ ಒಂದು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಶೆಟ್ಟಿ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ದೊಡ್ಡ ತಾರಾಬಳಗವಿರೋ ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಉತ್ಸವ ಲೆಗಸಿಯಲ್ಲಿ ಅದ್ದೂರಿಯಾಗಿ ನಡೆಯಿತು.

IMG-20260104-WA0026

ಕನ್ನಡದ ಹೆಸರಾಂತ ನಟಿ ಶ್ವೇತಾ ಶ್ರೀವಾಸ್ತವ್ "ದೇವನೊಬ್ಬ ಜಾದೂಗಾರ" ಟೀಸರ್ ಬಿಡುಗಡೆ ಮಾಡಿದರು. ನಿರ್ದೇಶಕ ಸಿಂಪಲ್ ಸುನಿ ಮತ್ತು ಬಿಗ್ ಬಾಸ್ ಖ್ಯಾತಿ ಹುಚ್ಚ ವೆಂಕಟ್ ಕಾರ್ಯಕ್ರಮಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಹಾರೈಸಿದರು.

IMG-20260104-WA0030

"ನಿರ್ದೇಶಕ ವರುಣ್ ವಸಿಷ್ಠ ಅವರಿಗಾಗಿ ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ದಿನದಿಂದ ನನಗೆ ವರುಣ್ ಪರಿಚಯ ಇದೆ. ಅಂದಿನಿಂದ ಅವರಿಗೆ ದೊಡ್ಡ ಸಿನಿಮಾ ನಿರ್ದೇಶನ ಮಾಡಬೇಕು ಎಂದು ಕನಸಿತ್ತು. ಇಂದು ಅದು ನಿಜವಾಗಿದೆ. ಇಂದು ಈ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ನನಗೆ ಹೆಮ್ಮೆ ಎನಿಸುತ್ತದೆ. ಚಿತ್ರ ಉತ್ತಮವಾಗಿ ಹೆಸರು ತರಲಿ, ಭವಿಷ್ಯದಲ್ಲಿ ಮತ್ತಷ್ಟು ಒಳ್ಳೆಯ ಚಿತ್ರಗಳು ಈ ಬ್ಯಾನರ್ ನಲ್ಲಿ ಬರಲಿ" ಎಂದು ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

IMG-20260104-WA0028

ಹೊಸ ವರ್ಷಕ್ಕೆ ಶುಭಾಶಯ ಕೋರುವುದರೊಡನೆ ಹೊಸ ಪ್ರತಿಭೆಗಳಿಗೆ ಹೊಸ ಪ್ರಯತ್ನಕ್ಕೆ ನಿರ್ದೇಶಕ ಸಿಂಪಲ್ ಸುನಿ ಮತ್ತು ಹುಚ್ಚ ವೆಂಕಟ್ ಶುಭಾಶಯ ಕೋರಿದರು

ನಿರ್ಮಾಪಕ ಬಾಲಕೃಷ್ಣ ಶೆಟ್ಟಿ ಮಾತನಾಡಿ "ನಾನು ಹಲವಾರು ವರ್ಷಗಳಿಂದ ವಿದೇಶದಲ್ಲಿ ಇದ್ದರೂ ನಾನು ಅಲ್ಲಿ ಕನ್ನಡ ಸಂಘ ಮಾಡಿದೆ. ಅನಿವಾಸಿ ಭಾರತೀಯರಿಗೆ ಮೊದಲ ಎನ್.ಆರ್.ಐ. ಸಂಘ ಕಟ್ಟಿದ್ದು ನಾನು. ಹಾಗೆ ನನಗೆ ಕನ್ನಡ ಎಂದರೆ ಬಹಳ ಅಭಿಮಾನ  ಅಂತಹಾ ಸಮಯದಲ್ಲಿ ವರುಣ್ ನನ್ನ ಬಳಿ ಬಂದು ಕಥೆ ಹೇಳಿದರು. ನನ್ನ ಮಗನಿಗೆ ಚಿತ್ರನಟನಾಗಬೇಕು ಎಂದು ಬಾಲ್ಯದಿಂದಲೇ ಆಸೆ ಇತ್ತು. ಅಂತಹಾ ಸಮಯದಲ್ಲಿ ನನ್ನ ಮಗನನ್ನು ನಾಯಕನೆಂದು ಮನಸ್ಸಿನಲ್ಲಿಟ್ಟುಕೊಂಡು ನಿರ್ದೇಶಕ ವರುಣ್ ಕಥೆ ಹೇಳಿದ್ದಾರೆ.ಇದು ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾದ ಚಿತ್ರ. ತಂಡದ ಪ್ರತಿಯೊಬ್ಬರೂ ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಈಗ ಮಾಧ್ಯಮ ಮಿತ್ರರು ಈ ಸಿನಿಮಾಗೆ ಬೆಂಬಲ ಕೊಡಬೇಕು"ಎಂದು ಮನವಿ ಮಾಡಿದರು.

IMG-20260104-WA0035

ನಿರ್ದೇಶಕ ವರುಣ್ ಮಾತನಾಡಿ " ನಾನು ಕಾಲೇಜು ದಿನಗಳಿಂದಲೂ ಶಾರ್ಟ್ ಮೂವಿ ಮಾಡಿಕೊಂಡು ಬಂದಿದ್ದೇನೆ. ಒಮ್ಮೆ ಫೇಸ್ ಬುಕ್ ನಲ್ಲಿ ಸಚಿನ್ ಅವರ ಪರಿಚಯವಾಯಿತು. ಅದೇ ಮುಂದೆ ಉಡುಪಿಗೆ ಹೋದಾಗ ಅವರನ್ನು ಭೇಟಿ ಮಾಡಿದೆ. ಆಗ ನನಗೆ ಅವರಲ್ಲೊಬ್ಬ ನಟ ಇದ್ದಾನೆ ಎಂದು ಗೊತ್ತಿರಲಿಲ್ಲ  ಆದರೆ ಅವರು ಮುಂದಿನ ದಿನಗಳಲ್ಲಿ ದೊಡ್ಡ ಕಲಾವಿದರಾಗುವ ಎಲ್ಲಾ ಲಕ್ಷಣಗಳ ತೋರಿಸಿದ್ದಾರೆ. ಇನ್ನು ಸುಧಾ ಬೆಳವಾಡಿ ಪ್ರಮುಖ ಪಾತ್ರ ಒಂದನ್ನು ನಿರ್ವಹಿಸಿದ್ದಾರೆ. ಇಲ್ಲಿ ಪ್ರತಿ ನಟರು ಇನ್ನೊಬ್ಬರಿಗೆ ಕಾಂಪೀಟ್ ಮಾಡುವ ರೀತಿಯಲ್ಲಿ ಅಭಿನಯಿಸಿದ್ದಾರೆ. ಇಲ್ಲಿ ಪ್ರತಿಯೊಬ್ಬ ನಟರ ಮೇಲೆ ಕಥೆ ಸಾಗುತ್ತದೆ ಎಂದು ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ