-  ರಾಘವೇಂದ್ರ ಅಡಿಗ ಎಚ್ಚೆನ್.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಸ್ಯಾಂಡಲ್‌ವುಡ್ ನಟ ಹಾಗೂ ಆಪ್ತ ಸ್ನೇಹಿತ ಧನ್ವೀರ್ ಗೌಡ ಮಂಗಳವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು (ಜುಲೈ 28) ಬೆಳಿಗ್ಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ ಧನ್ವೀರ್ ಗೌಡ, ಯಾವುದೇ ಕುಟುಂಬ ಸದಸ್ಯರು ಅಥವಾ ಇತರ ಸ್ನೇಹಿತರಿಲ್ಲದೆ ಒಬ್ಬರೇ ಭೇಟಿ ನೀಡಿದರು. ಈ ಹಿಂದೆ ಕೂಡ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು.

ಜೈಲಿನಲ್ಲಿ ನಡೆದ ಭೇಟಿಯ ವೇಳೆ ಇಬ್ಬರೂ ಪರಸ್ಪರ ಆತ್ಮೀಯವಾಗಿ ಮಾತುಕತೆ ನಡೆಸಿದರೆಂದು ತಿಳಿದುಬಂದಿದೆ. ದರ್ಶನ್ ಅವರನ್ನು ಕಂಡು ಧನ್ವೀರ್ ಗೌಡ ಭಾವುಕರಾಗಿದ್ದು, ಧನ್ವೀರ್ ಅವರನ್ನು ಕಂಡು ದರ್ಶನ್ ಕೂಡ ಭಾವನಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಜೈಲು ನಿಯಮಾವಳಿಗಳ ಪ್ರಕಾರ ನಿಗದಿತ ಸಮಯದಲ್ಲಿ ಇಬ್ಬರೂ ಮಾತುಕತೆ ನಡೆಸಿದ್ದು, ಚರ್ಚೆಯ ಸಂಪೂರ್ಣ ವಿವರ ಬಹಿರಂಗವಾಗಿಲ್ಲ. ಆದರೆ ದರ್ಶನ್ ಅವರ ಆರೋಗ್ಯ, ಮಾನಸಿಕ ಸ್ಥಿತಿ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಇಬ್ಬರ ನಡುವೆ ಮಾತುಕತೆ ನಡೆದಿರಬಹುದು ಎನ್ನಲಾಗಿದೆ.

ಈ ಭೇಟಿಯ ವೇಳೆ ನಟ ದರ್ಶನ್ ಅವರ ವಿರುದ್ಧದ ಪ್ರಕರಣ ಹಾಗೂ ಜಾಮೀನು ಸೇರಿದಂತೆ ವಿವಿಧ ವಿಚಾರಗಳು ಚರ್ಚೆಯಾಗಿರುವ ಸಾಧ್ಯತೆ ಇದ್ದರೂ, ಇದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

ಧನ್ವೀರ್ ಗೌಡ ಜೈಲಿಗೆ ಆಗಮಿಸಿ ಮರಳಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ