ಜಾಗೀರ್ದಾರ್*
ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ "ಗ್ರೀನ್" ಚಿತ್ರ ಈ ವಾರ ತೆರೆಗೆ ಬರುತ್ತಿದೆ. ನಿಶಾಂತ್ ಎನ್ ಎನ್ ಒಡೆತನದ ಗುನಾದ್ಯ ಪ್ರೊಡಕ್ಷನ್ಸ್ “ಗ್ರೀನ್” ಚಿತ್ರವನ್ನು ತೆರೆಗೆ ತರಲು ಬೆನ್ನೆಲುಬಾಗಿ ನಿಂತಿದೆ.

ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜೊತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.
ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಆರ್.ಜೆ.ವಿಕ್ಕಿ, ವಿಶ್ವನಾಥ್ ಮಾಂಡಲಿಕ, ಶಿವ ಮಂಜು, ಡಿಂಪಿ ಫದ್ಯಾ ಹಾಗೂ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಕೆ.ಮಧುಸೂದನ್ ಛಾಯಾಗ್ರಹಣ ಹಾಗೂ ಶಕ್ತಿ ಅವರ ಸಂಗೀತ ನಿರ್ದೇಶನವಿದೆ.

ಗ್ರೀನ್ ಒಂದು ಮನೋವೈಜ್ಞಾನಿಕ ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವಾಗಿದ್ದು, ಇದು ವೀಕ್ಷಕರನ್ನು ಮಾನವ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ವಿಭಿನ್ನ ಕಥಾಹಂದರ ಹೊಂದಿರುವ "ಗ್ರೀನ್" ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ.





