- ರಾಘವೇಂದ್ರ ಅಡಿಗ ಎಚ್ಚೆನ್.

ಬೆಳ್ಳಿ ಪರದೆಯ ಮೇಲೆ ಸಾಲು ಸಾಲು ವಿಭಿನ್ನ ಬಗೆಯ ಚಿತ್ರಗಳು ಪ್ರೇಕ್ಷಕರ ಗಮನ ಸೆಳೆಯಲು ನಿರಂತರವಾಗಿ ಬರುತ್ತಿದೆ. ಆ ನಿಟ್ಟಿನಲ್ಲಿ ತನ್ನ ಶೀರ್ಷಿಕೆ ಹಾಗೂ ಟೀಸರ್ ಮೂಲಕವೇ ಸದ್ದು ಮಾಡಲು ಬರುತ್ತಿದೆ ಯುವ ಪಡೆಗಳ ಚಿತ್ರ “ಕರಿಕಾಡ”. ಈ ಚಿತ್ರವನ್ನು ರಿದ್ದಿ ಎಂಟಸ್ಟೈನ್‌ಮೆಂಟ್ಸ್ ಬ್ಯಾನ‌ರ್ ಅಡಿ ದೀಪ್ತಿ ದಾಮೋದರ್ ನಿರ್ಮಿಸಿ, ಗಿಲ್ಲಿ ವೆಂಕಟೇಶ್ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದು, ಅತಿಶಯ್ ಜೈನ್ ಸಂಗೀತ, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ಕಥೆ ಕೊಟ್ಟು ಚಿತ್ರದಲ್ಲಿ ನಾಯಕನಟನಾಗಿ ಕಾಡ ನಟರಾಜ್ ಬಣ್ಣಹಚ್ಚಿದ್ದಾರೆ. ಈ ಚಿತ್ರದ ಟೈಟಲ್, ಟೀಸರ್ ಅನ್ನು ಇತ್ತೀಚೆಗೆ ಖ್ಯಾತ ನಿರ್ದೇಶಕ ಸಂತೋಷ್ ಆನಂದರಾಮ್ ಬಿಡುಗಡೆ ಮಾಡಿದರು.

WhatsApp-Image-2025-06-07-at-1.30.52-PM-768x960

ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ನಿರ್ದೇಶಕ ಸಂತೋಷ್ ಆನಂದರಾಮ್ ಅವರು, ಚಿತ್ರರಂಗದ ಪರಿಸ್ಥಿತಿಯ ಜೊತೆಗೆ ಕನ್ನಡ ಚಿತ್ರಗಳನ್ನು ಪ್ರೇಕ್ಷಕರು ಬಂದು ನೋಡಬೇಕು. ನನ್ನ ಜೊತೆ ಕೆಲಸ ಮಾಡಿದಂತಹ ಶಶಾಂಕ್ ಶೇಷಗಿರಿ ಈ ಕಾರ್ಯಕ್ರಮಕ್ಕೆ ಬರಲು ಆಹ್ವಾನ ನೀಡಿದರು. ಇದೊಂದು ಉತ್ಸಾಹಿ ತಂಡ. ಈ ಟೈಟಲ್ ಬಹಳಷ್ಟು ನಿರೀಕ್ಷೆ ಮೂಡಿಸುತ್ತದೆ. ಹೊಸಬರು ಟೀಸರ್ ನಲ್ಲಿ ಗಮನ ಸೆಳೆದಿದ್ದಾರೆ. ಚಿತ್ರ ಬಿಡುಗಡೆಗೊಂಡು ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.

WhatsApp-Image-2025-06-07-at-2.45.15-PM

ಈ ಚಿತ್ರದ ಬಗ್ಗೆ ನಿರ್ದೇಶಕ ಗಿಲ್ಲಿ ವೆಂಕಟೇಶ್ ಮಾತನಾಡುತ್ತಾ ಈ ಚಿತ್ರದ ‘ಶೀರ್ಷಿಕೆ ಅಕ್ಕಪಕ್ಕ ಆನೆ ಮತ್ತು ಕಾಡು ಹಂಡಿಯ ತಲೆಗಳನ್ನು ನೋಡಬಹುದು. ಕರಿ ಎಂದರೆ ಆನೆ, ಕಾಡ ಎಂದರೆ ನಾಯಕನ ಹೆಸರು. ಇಲ್ಲಿ ನಾಯಕ ಕಾಡುಹಂದಿ ಬೇಟೆ ಆಡುತ್ತಿರುತ್ತಾನೆ. ಮದ್ದಾನೆ ತರಹದ ಪಾತ್ರ ಅವನದು. ಮದ ಹಿಡಿದ ಆನೆಯನ್ನು ಹಿಡಿಯುವುದು ಎಷ್ಟು ಕಷ್ಟವೋ, ಅದೇ ರೀತಿ ಅವನನ್ನು ಹಿಡಿಯುವುದು ಅಷ್ಟೇ ಕಷ್ಟ’ ಎಂದರು. ಈ ಚಿತ್ರಕ್ಕೆ ಕಳಸ, ಚಿಕ್ಕಮಗಳೂರು, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ‘1990 ಮತ್ತು 2025ರ ಕಾಲಘಟ್ಟದಲ್ಲಿ ಕಥೆ ನಡೆಯುತ್ತದೆ. ಇದೊಂದು ಸಂಗೀತಮಯ ಪ್ರೇಮಕಥೆ. ನಾಯಕಿಗೂ ಒಂದು ಪ್ರಮುಖ ಪಾತ್ರವಿದೆ. ಸದ್ಯಕ್ಕೆ ಅವರನ್ನು ಪರಿಚಯಿಸಿಲ್ಲ. ನಾಯಕನ ತರಹ ನಾಯಕಿಗೂ ಒಂದು ಟೀಸರ್ ಮಾಡಿ ಪರಿಚಯಿಸಲಾಗುತ್ತದೆ. ಚಿತ್ರ ಸಂಪೂರ್ಣವಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಆಗಲಿದೆ. ಇದೇ ವರ್ಷ ಚಿತ್ರ ಬಿಡುಗಡೆ ಆಗುತ್ತದೆ’ ಎಂದು ಮಾಹಿತಿ ಕೊಟ್ಟರು.

WhatsApp-Image-2025-06-07-at-2.44.42-PM

'ಕರಿಕಾಡ’ ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಬಣ್ಣದ ಲೋಕದ ಕನಸು ಹೊತ್ತು ಕಾಡ ನಟರಾಜ್ ‘ಕರಿಕಾಡ’ ಚಿತ್ರ ಮೂಲಕ ಪ್ರೇಕ್ಷಕರ ಆಶೀರ್ವಾದ ಗಿಟ್ಟಿಸಿಕೊಳ್ಳಲು ಬರುತ್ತಿದ್ದಾರೆ. ಸದಾ ಚಿತ್ರಜಗತ್ತಿನ ಕನಸು ಕಾಣುತ್ತಾ ಐಟಿ ವಲಯದಲ್ಲಿ ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಕೆಲಸ ಮಾಡ್ತಿರೋ ಕಲಾವಿದ. ಐಟಿ ಜಗತ್ತಿನಲ್ಲಿ ವಾರದ ಐದು ದಿನ ಕೆಲಸ ಮಾಡಿ ಇನ್ನೆರಡು ದಿನ ಸಿನಿಮಾ ಶೂಟಿಂಗ್​​ನಲ್ಲಿ ಕನಸಿನ ಗುರಿಯ ಕಡೆ ಧ್ಯಾನ ಮಾಡಿದ್ದಾರೆ ಕಾಡ ನಟರಾಜ್.
ಕರಿಕಾಡ’ ಚಿತ್ರದಲ್ಲಿ ನಟರಾಜ್ ಜೊತೆಗೆ ನಿರೀಕ್ಷಾ ಶೆಟ್ಟಿ, ಯಶ್ ಶೆಟ್ಟಿ, ಬಲ ರಾಜವಾಡಿ, ವಿಜಯ್ ಚೆಂಡೂರ್, ಕರಿಸುಬ್ಬು, ಚಂದ್ರಪ್ರಭಾ, ರಾಕೇಶ್ ಪೂಜಾರಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅತೀಶಯ್ ಜೈನ್ ಹಾಗೂ ಶಶಾಂಕ್ ಶೇಷಾಗಿರಿ ಅವರುಗಳ ರಾಗ ಸಂಯೋಜನೆ ಇದೆ. ಶಶಾಂಕ್ ಶೇಷಾಗರಿ ಅವರು ರಾಗ ಸಂಯೋಜನೆ ಜೊತೆಗೆ ಜಬರ್ದಸ್ತ್ ಹಿನ್ನಲೆ ಸಂಗೀತವನ್ನ ನೀಡಿದ್ದಾರೆ. ಕ್ಯಾಮರಾ ಸಾರಥಿಯಾಗಿ ಜೀವನ್ ಗೌಡ ಕೆಲಸ ಮಾಡಿದ್ದಾರೆ. ದೀಪಕ್ ಸಿ.ಎಸ್ ಸಂಕಲನವಿದೆ. ಚಿಕ್ಕಮಗಳೂರು , ಕಳಸ , ಕುದುರೆ ಮುಖ , ಮಂಡ್ಯ , ಚೆನ್ನರಾಯ ಪಟ್ನ ಸೇರಿದಂತೆ ರಾಜ್ಯದ ಅನೇಕ ರಮಣಿ ಸ್ಥಳಗಳಲ್ಲಿ ‘ಕರಿಕಾಡ’ ಚಿತ್ರೀಕರಣವಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ