– ರಾಘವೇಂದ್ರ ಅಡಿಗ ಎಚ್ಚೆನ್.
ಶ್ರೀಗುರುರಾಯರು ಸಿನಿಮಾ ಬ್ಯಾನರ್ ನಡಿಯಲ್ಲಿ ಹೊಸ ಮುನ್ನುಡಿ
ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ.. ಹೊಸ ತಲೆಮಾರಿನ ಸಿನಿಮಾಗಳು ಬರ್ತಿವೆ.. ಜಾಗತಿಕ ಮಟ್ಟದಲ್ಲಿ ಕನ್ನಡದ ಕಂಪು ಇಂಪನ್ನ ಸೂಸ್ತಿವೆ.. ಈ ಬೆಳವಣಿಗೆಗೆ ಅಡಿಪಾಯ ಹಾಕಿದವರು.. ಆ ಕಾಲಘಟ್ಟದಲ್ಲಿ ಹಲವು ದಾಖಲೆಗಳನ್ನ ಬರೆದವರು… ಹೊಸ ಅಲೆಯ ಸಿನಿಮಾಗಳಿಗೆ ಮುದ್ರೆ ಹಾಕಿದವರು… ಮತ್ತೆ ಬರ್ತಿದ್ದಾರೆ. ಅದೇ ಉತ್ಸಾಹ.. ಅದೇ ಹುಮ್ಮಸ್ಸು.. ಅದೇ ಸಿನಿಮಾ ಶಿಸ್ತಿನಲ್ಲಿ.. ಈ ತಲೆಮಾರಿಗೊಂದು ನವ್ಯ ಸಿನಿಮಾ ಕೊಡಲು ಸಜ್ಜಾಗಿದ್ದಾರೆ..ಅವರೇ.. ನಿರ್ದೇಶಕ ಎಸ್ ಮಹೇಂದರ್ ಮತ್ತು ನಾದಬ್ರಹ್ಮ ಹಂಸಲೇಖ.

ಸುಮಾರು 20 ಸಿನಿಮಾಗಳಿಗೆ ಜೊತೆಯಾಗಿ ಕೆಲಸ ಮಾಡಿ… ಸತತ ಗೆಲುವುಗಳನ್ನ ಸಂಭ್ರಮಿಸಿದ್ದ ಇವರು, ಮತ್ತೊಂದು ಹೊಸ ದೃಶ್ಯಕಾವ್ಯಕ್ಕೆ ಕೈ ಜೋಡಿಸಿದ್ದಾರೆ.

ಈ ಸೂಪರ್ ಹಿಟ್ ಕಾಂಬಿನೇಷನ್ ಸಿನಿಮಾಗೆ, ಸುಮಾರು ಮೂರು ದಶಕಗಳಿಂದ ಚಿತ್ರರಂಗದ ಒಡನಾಡಿಯಾಗಿದ್ದಂತಹ, ಹಲವು ಸಿನಿಮಾಗಳಿಗೆ ಆರ್ಥಿಕವಾಗಿ ಬೆಂಬಲವಾಗಿ ಬೆನ್ನೆಲುಬಾಗಿ ನಿಂತಿದ್ದ ಕೆ.ಸಿ ವಿಜಯ್ ಕುಮಾರ್ ಈ ಚಿತ್ರಕ್ಕೆ ಬಂಡವಾಳ ಹೂಡುತಿದ್ದಾರೆ.

ಶ್ರೀಗುರುರಾಯರು ಸಿನಿಮಾ ಬ್ಯಾನರ್ ನಡಿಯಲ್ಲಿ ಚಿತ್ರ ಸೆಟ್ಟೇರಲಿದ್ದು, ಇದೇ ತಿಂಗಳ 16ನೇ ತಾರೀಖು ಚಿತ್ರದ ಶೀರ್ಷಿಕೆ ಮತ್ತು ಚಿತ್ರತಂಡದ ಅಧಿಕೃತ ಪರಿಚಯ ಮಾಡಿಕೊಡಲಿದ್ದಾರೆ.





