ಜಾಗೀರ್ದಾರ್*

ವೃಕ್ಷಗಳನ್ನೇ ಮಕ್ಕಳಾನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಸಿನಿಮಾ ರೂಪದಲ್ಲಿ ಬರಲಿದೆ. ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್ ಆರ್ , ಸೌಜನ್ಯ ಡಿ.ವಿ, ಎ ಸಂತೋಷ್ ಮುರಳಿ ಹಾಗೂ ಒರಟ ಶ್ರೀ ನಿರ್ಮಾಣದ ಈ ಚಿತ್ರ ಡಾ||ನೆಲ್ಲಿ ಕಟ್ಟೆ ಎಸ್ ಸಿದ್ದೇಶ್ ಅವರ "ವೃಕ್ಷಮಾತೆ ಸಾಲುಮರದ ತಿಮ್ಮಕ್ಕ" ಕೃತಿ ಆಧಾರಿತವಾಗಿದೆ.

"ಒರಟ ಐ ಲವ್ ಯು" ಖ್ಯಾತಿಯ ನಿರ್ದೇಶಕ ಒರಟ ಶ್ರೀ ಮೊದಲ ಬಾರಿಗೆ ಕಲಾತ್ಮಕ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು.. ನಟಿ ಸೌಜನ್ಯ ತಿಮ್ಮಕ್ಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ‌. ನೀನಾಸಂ ಅಶ್ವಥ್ ತಿಮ್ಮಕ್ಕನ ಗಂಡನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಎಂ.ಕೆ ಮಠ, ಗಣೇಶ್ ಕೆ ಸರ್ಕಾರ್, ದೀಪ ಡಿ‌.ಕೆ ಅಂಜನಮ್ಮ, ಭೂಮಿಕಾ, ಪ್ರಕಾಶ್ ಶೆಟ್ಟಿ, ಮನು ಮುಂತಾದವರು ತಾರಾಬಳಗದಲ್ಲಿದ್ದಾರೆ.

mara2

ಇತ್ತೀಚೆಗೆ ಚಿತ್ರೀಕರಣ ಪ್ರಾರಂಭವಾಗಿದ್ದು, ತುಮಕೂರು ಜಿಲ್ಲೆಯ ಹುಲಿಕಲ್ ಹಾಗೂ ಮಧುಗಿರಿಯ ಸುತ್ತಮುತ್ತ ಚಿತ್ರಿಕರಣವಾಗಿದೆ. ಮೊದಲ ಹಂತದ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಮುಂದಿನ ವಾರದಲ್ಲಿ ಎರಡನೇ ಶೆಡ್ಯೂಲ್ ಆರಂಭವಾಗಲಿದೆ.

mara1

ನಾಗರಾಜ್ ಛಾಯಾಗ್ರಹಣ, ಕೆ ಗಿರೀಶ್ ಕುಮಾರ್ ಸಂಕಲನ, ಶ್ಯಾಮ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸಂಭಾಷಣೆ ಹಾಗೂ ಸಾಹಿತ್ಯವನ್ನು ನೆಲ್ಲಿಕಟ್ಟೆ ಸಿದ್ದೇಶ್ ಹಾಗೂ ಒರಟ ಶ್ರೀ ಬರೆದಿದ್ದಾರೆ.

ಇತ್ತೀಚೆಗೆ ಚಿತ್ರದ ಶೀರ್ಷಿಕೆಯನ್ನು ಹಿರಿಯ ಬರಹಗಾರ್ತಿ ಹಾಗೂ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ಬಾಯಿ ಅನಾವರಣಗೊಳಿಸಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ