ರಾಘವೇಂದ್ರ ಅಡಿಗ ಎಚ್ಚೆನ್.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜೈಲಿನಲ್ಲಿ ವಿಶೇಷ ಅನುಮತಿಯೊಂದಿಗೆ ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದ ಅವಕಾಶವನ್ನು ಹೈಕೋರ್ಟ್ ರದ್ದುಪಡಿಸಿದೆ.

IMG-20260304-WA0015

ಈ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರಿಗೆ ಈ ಹಿಂದೆ 57ನೇ ಸಿಸಿಎಚ್ ನ್ಯಾಯಾಲಯ ವಾರಕ್ಕೊಮ್ಮೆ ಅಥವಾ ವೈದ್ಯಕೀಯ ಕಾರಣಗಳಿದ್ದಲ್ಲಿ ಮನೆ ಊಟಕ್ಕೆ ಅನುಮತಿ ನೀಡಿತ್ತು. ಅದರಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದವರು ಮನೆಯಿಂದ ಆಹಾರ ತರಿಸಿಕೊಳ್ಳುತ್ತಿದ್ದರು.

IMG-20260304-WA0011

ಆದರೆ ಈ ವಿಶೇಷ ಸೌಲಭ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ವಿಚಾರಿಸಿದ ಹೈಕೋರ್ಟ್ ಪೀಠವು, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದಲ್ಲಿ, ಟ್ರಯಲ್ ಕೋರ್ಟ್ ಆದೇಶವನ್ನು ರದ್ದುಪಡಿಸಿದೆ. “ಆರೋಪಿ ಕೇಳಿದ ಕೂಡಲೇ ಮನೆ ಊಟಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ; ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಅವಕಾಶ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

IMG-20260304-WA0013

ಜೈಲು ಅಧಿಕಾರಿಗಳು ಆರಂಭದಿಂದಲೂ ಮನೆಯಿಂದ ಆಹಾರ ತರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಎಫ್‌ಎಸ್‌ಎಸ್‌ಎಐ ಮಾರ್ಗಸೂಚಿಗಳಂತೆ ಜೈಲಿನಲ್ಲಿ ಗುಣಮಟ್ಟದ ಆಹಾರ ಒದಗಿಸಲಾಗುತ್ತಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

 

 

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ