ಉಮೇಶ್ ಫಿಲಂಸ್ ಲಾಂಛನದಲ್ಲಿ ಎನ್. ಹನುಮಂತರಾಜು, ಎನ್.ಹೆಚ್.ಉಮೇಶ್  ನಿರ್ಮಿಸುತ್ತಿರುವ ' ರುಕ್ಮಿಣಿ  ರಾಧಾಕೃಷ್ಣ ಚಿತ್ರಕ್ಕೆ ಪ್ರಾಣ್ ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ.  ಸುನಾದ್ ಗೌತಂ ಅವರ ಸಂಗೀತ ನಿರ್ದೇಶನವಿರುವ  ೨ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಪಾರು ಖ್ಯಾತಿಯ ಮೋಕ್ಷಿತಾ ಪೈ, ರಿಯಾ ಸಚ್ ದೇವ್ ಈ ಚಿತ್ರದ  ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಆಡಿಯೋ ರಿಲೀಸ್ ಮಾಡಿದ ಲಹರಿ ವೇಲು ಮಾತನಾಡುತ್ತ ಈ ಚಿತ್ರದಲ್ಲಿ ೫ ಸುಂದರ ಹಾಡುಗಳಿದ್ದು, ಅವುಗಳನ್ನು ಅಷ್ಟೇ ಅದ್ಭುತವಾಗಿ ಪಿಚ್ಚರೈಜೇಷನ್ ಮಾಡಿದ್ದಾರೆ. ನಾನು ಕೂಡ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದರು.

ಸಾಹಿತಿ ಕೆ.ಕಲ್ಯಾಣ್ ಮಾತನಾಡಿ  ನಿರ್ಮಾಪಕರಲ್ಲಿರುವ ಸಿದ್ದತೆ, ನಿರ್ದೇಶಕರಲ್ಲಿರುವ ಬದ್ದತೆ ಹಾಡುಗಳಲ್ಲಿ ಎದ್ದು ಕಾಣುತ್ತದೆ. ನಾಯಕಿ ಪಾತ್ರಕ್ಕೆ  ತಮಿಳು ಹಿನ್ನೆಲೆ ಇರುತ್ತದೆ. ಹಾಗಾಗಿ ತಮಿಳು, ಕನ್ನಡ ಸೇರಿಸಿ ಒಂದು ಹಾಡನ್ನು ರಚಿಸಿದ್ದೇನೆ ಎಂದರು.

1001021880

ನಾಯಕ ಭರತ್ ಕುಮಾರ್ ಮಾತನಾಡುತ್ತ ಲಹರಿ ವೇಲು ಅವರ ಬಳಿ ಹೋದಾಗ ಬಹಳ ಅರ್ಥ ಪೂರ್ಣವಾದ ಸಾಲುಗಳನ್ನು ಹಾಕಿದ್ದೀರಿ ಎಂದು ಪ್ರಶಂಸಿಸಿದರು. ಅಲ್ಲದೆ  ಒಳ್ಳೆಯ ಮೊತ್ತಕ್ಕೆ  ಆಡಿಯೋ ಮಾಡಿಕೊಟ್ಟರು. ೨ ಭಾಷೆಯ ಸಾಂಗ್ ಬೇಕು ಎಂದಾಗ ಕೆ.ಕಲ್ಯಾಣ್ ಅದಕ್ಕೆ ತಕ್ಕಂತೆ ಸಾಲುಗಳನ್ನು ಪೋಣಿಸಿದರು. ರಾಧಾ ಪಾತ್ರವನ್ನು ಪಾರು ಮೋಕ್ಷಿತಾ ಮಾಡಿದರೆ ಚೆನ್ನಾಗಿರುತ್ತೆ ಎಂದು ನಮ್ಮಮ್ಮ ಸಲಹೆ ಕೊಟ್ಟರು. ಇನ್ನು ಪ್ರೊಡ್ಯೂಸರ್ ಇಬ್ಬರೂ ನನ್ನ ಬ್ರದರ್ಸ್ ಇದ್ದಹಾಗೆ. ರುಕ್ಮಿಣಿಗೂ ಕೃಷ್ಣನಿಗೂ ಮಧ್ಯೆ ಇರುವ ಆತ್ಮವೇ ರಾಧಾ. ಈ ಹಾಡುಗಳು ಇಷ್ಟು ಚೆನ್ನಾಗಿ ಬರಲು ಸುನಾದ್ ಗೌತಂ ಅವರೇ ಕಾರಣ ಎಂದರು.

1001021878

ನಾಯಕಿ ಮೋಕ್ಷಿತಾ ಪೈ ಮಾತನಾಡುತ್ತ ಕಥೆ ಹೇಳಲು ನಿರ್ಮಾಪಕರ ಜತೆ ಭರತ್ ಕೂಡ ಬಂದಿದ್ದರು. ನಿಮಗೆ ಯಾವ ಪಾತ್ರ ಬೇಕು ಎಂದಾಗ ನಾನು ಪಾತ್ರವನ್ನೇ ಸೆಲೆಕ್ಟ್ ಮಾಡಿಕೊಂಡೆ, ಆ ಪಾತ್ರದ ಇನ್ಟೆನ್ಸ್ ನನಗೆ ತುಂಬಾ ಇಷ್ಟವಾಯ್ತು. ರುಕ್ಮಿಣಿ ಇಲ್ಲದೆ ರಾಧಾ ಇಲ್ಲ, ಕುಂಭ ಕೋಣಂನಲ್ಲಿ ಈ ಹಾಡನ್ನು ಚಿತ್ರೀಕರಿಸಿದ್ದೇವೆ ಎಂದರು. ನಟಿ, ಮಾಡೆಲ್ ಕೂಡ ಆದ ರಿಯಾ ಸಚ್ ದೇವ್ ಮಾತನಾಡುತ್ತ ನಾನಿಲ್ಲಿ  ರುಕ್ಮಿಣಿ ಪಾತ್ರ ಮಾಡಿದ್ದೇನೆ. ನನ್ನ ಮೇಲೆ ನಂಬಿಕೆಯಿಟ್ಟು ಈ ಪಾತ್ರ ಕೊಟ್ಟಿದ್ದಾರೆ ಎಂದರು.

ಸಂಗೀತ ನಿರ್ದೇಶಕ ಸುನಾದ್ ಗೌತಂ ಮಾತನಾಡುತ್ತ ಕಥೆ ತುಂಬಾ ಯೂನಿಕ್ ಆಗಿದೆ. ದೊಡ್ಡದಾಗಿ ಪ್ರೊಜೆಕ್ಟ್ ಮಾಡಬೇಕು ಅಂತ ಕನಸಿಟ್ಟುಕೊಂಡಿದ್ದಾರೆ ಎಂದರು.

1001020563

ನಿರ್ದೇಶಕ ಪ್ರಾಣ್ ಸುವರ್ಣ ಮಾತನಾಡಿ  ಕಲ್ಯಾಣ್ ಅವರು ಟ್ಯೂನ್ ಕೊಟ್ಟ ಮಾರನೇ ದಿನವೇ ಲಿರಿಕ್ ಕೊಟ್ಟರು. ಪಿನಾಕಾ  ಸಮಯದಲ್ಲಿ ನನಗೆ ಭರತ್ ಪರಿಚಯವಾದರು. ನನ್ನ ಕೆಲಸ ಇಷ್ಟಪಟ್ಟು ಸಿನಿಮಾ ಮಾಡೋಣ ಅಂತ ಹೇಳಿ ನಿರ್ಮಾಪಕರ ಬಳಿ ಕರೆದುಕೊಂಡು ಹೋದರು. ಭರತ್ ಹೇಳಿದ ಒಂದು ಲೈನ್ ಇಟ್ಡುಕೊಂಡು ಈ ಸ್ಕ್ರಿಪ್ಟ್ ಮಾಡಿದ್ದೇನೆ. ಕೃಷ್ಣನಿಗೆ  ಆತ್ಮ ಅಂತ ಇರೋದು ರಾಧ, ರುಕ್ಮಿಣಿ ಕೃಷ್ಣನ ಸಂಗಾತಿಯಾಗಿ ಉಳಿದರೂ ರಾಧ ಆತನ ಆತ್ಮವಾಗಿ ಉಳಿದುಕೊಳ್ತಾಳೆ.ಕುಂಭಕೋಣಂನಲ್ಲಿ ಚಿತ್ರದ ಮೇಜರ್ ಪೋರ್ಷನ್ ನಡೆಯುತ್ತದೆ ಎಂದರು. ನಿರ್ಮಾಪಕ ಉಮೇಶ್ ಮಾತನಾಡಿ ೯೦ರಷ್ಟು ಶೀ

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ