- ರಾಘವೇಂದ್ರ ಅಡಿಗ ಎಚ್ಚೆನ್.
ಪ್ರಧಾನಿ ನರೇಂದ್ರ ಮೋದಿ ಅವರಿಗೆ 'ಭಾರತ ಭಾಗ್ಯವಿಧಾತ' ಬಿರುದು

ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ʻನೀರು ನದಿಯ ರಕ್ಷಿಸೋದುʼ ಆಗಲಿ. ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ. ಉತ್ತಮ ಆರೋಗ್ಯ, ಯೋಗ ಸಂಕಲ್ಪ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ಉಡುಪಿ ಲಕ್ಷ ಕಂಠ ಭಗವದ್ಗೀತಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ʻಎಲ್ಲರಿಗೂ ನಮಸ್ಕಾರ.. ಜೈ ಶ್ರೀಕೃಷ್ಣʼ ಎನ್ನುತ್ತಾ ಕನ್ನಡದಲ್ಲೇ ಮಾತು ಆರಂಭಿಸಿದರು. ಶ್ರೀ ಕೃಷ್ಣನ ದಿವ್ಯ ದರ್ಶನದ ಸಂತುಷ್ಟಿ, ಭಗವದ್ಗೀತೆ ಮಂತ್ರದ ಆಧ್ಯಾತ್ಮಿಕ ಅನುಭೂತಿ, ಸಂತರು, ಗುರುಗಳ ಉಪಸ್ಥಿತಿ ಎಲ್ಲವೂ ಲಭಿಸಿರುವುದು ನನ್ನ ಪರಮ ಸೌಭಾಗ್ಯ. ಇದು ಇನ್ನೂ ಹೆಚ್ಚಿನ ಕೆಲಸ ಮಾಡಲು ಹಾಗೂ ಜನರ ಅಪೇಕ್ಷೆಗಳನ್ನ ಪೂರೈಸಲು ಶಕ್ತಿ ಸಿಕ್ಕಂತಾಗಿದೆ ಎಂದು ಶ್ಲಾಘಿಸಿದರು.

ramabhoomi

ಉಡುಪಿ ಕ್ಷೇತ್ರ ಭಕ್ತಿ ಹಾಗೂ ಸೇವೆಯ ಸಂಗಮ ಕ್ಷೇತ್ರ. ನನ್ನ ಜನ್ಮ ಗುಜರಾತ್ ನಲ್ಲಿ ಆಗಿದ್ದು. ಆದ್ರೂ ಗುಜರಾತ್ ಮತ್ತು ಉಡುಪಿಗೆ ಅವಿನಾಭಾವ ಸಂಬಂಧ ಇದೆ. ಉಡುಪಿ ಕೃಷ್ಣನ ದರ್ಶನ ಪಡೆದಿದ್ದು ಆಧ್ಯಾತ್ಮಿಕ ಖುಷಿ ಸಿಕ್ಕಂತಾಗಿದೆ. ಲಕ್ಷ ಕಂಠದ ಮೂಲಕ ಗೀತಾ ಪಠಣ ಒಂದೇ ಸ್ಥಳದಲ್ಲಿ ಒಂದೇ ವೇಳೆ ಆಗಿರುವುದು ಹೊಸ ಶಕ್ತಿ ನೀಡಿದಂತಾಗಿದೆ. ಈ ಕೆಲಸ ಮಾಡಿರುವ ಸುಗುಣೇಂದ್ರ ಶ್ರೀಗಳಿಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರಲ್ಲದೇ ಉಡುಪಿಯು ಜನ ಸಂಘ ಹಾಗೂ ಬಿಜೆಪಿಯ ಕರ್ಮಭೂಮಿ. ಜನ ಸಂಘದಲ್ಲಿ ನಮ್ಮ ವಿ.ಎಸ್.ಆಚಾರ್ಯರನ್ನ ಆಯ್ಕೆ ಮಾಡಿದ್ದು ಉಡುಪಿಯ ಜನ.  ಮೂರು ದಿನಗಳ ಹಿಂದೆ ನಾನು ಅಯೋಧ್ಯೆಯಲ್ಲಿದ್ದೆ. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಧರ್ಮಧ್ವಜ ಸ್ಥಾಪನೆ ಆಗಿದೆ. ಅಯೋಧ್ಯೆಯಿಂದ ಉಡುಪಿಯವರೆಗೂ ರಾಮ ಭಕ್ತರು ಸಾಕ್ಷಿಯಾಗಿದ್ದಾರೆ. ಮಧ್ವಾಚಾರ್ಯರು ಭಕ್ತಿಯ ಮಾರ್ಗ ತೋರಿಸಿಕೊಟ್ಟಿದ್ದಾರೆ. ಅವರ ಮಾರ್ಗದರ್ಶನದಿಂದ ಆರಂಭಗೊಂಡ ಈ ಅಷ್ಟ ಮಠಗಳು ಇಂದಿಗೂ ಧರ್ಮಕಾರ್ಯದಲ್ಲಿ ತೊಡಗಿವೆ ಎಂದು ಶ್ಲಾಘಿಸಿದರು.

ramabhoomi 1

ರಾಮಮಂದಿರ ಆಂದೋಲನದಲ್ಲಿ ಉಡುಪಿ ಜನರ ಪಾತ್ರ ದೇಶಕ್ಕೇ ಗೊತ್ತಿದೆ
ಶ್ರೀರಾಮಮಂದಿರ ಆಂದೋಲನದಲ್ಲಿ ಉಡುಪಿ ಜನರ ಪಾತ್ರ ಇಡೀ ದೇಶಕ್ಕೆ ಗೊತ್ತಿದೆ. ದಿ. ಪೇಜಾವರ ಶ್ರೀಗಳನ್ನ ನಾವು ಸ್ಮರಿಸಲೇಬೇಕು. ಅಲ್ಲದೇ ರಾಮಮಂದಿರ ನಿರ್ಮಾಣ ಉಡುಪಿಗೆ ಮತ್ತೊಂದು ಕಾರಣಕ್ಕೆ ವಿಶೇಷವಾಗಿದೆ. ಹೊಸ ಮಂದಿರದಲ್ಲಿ ಮಧ್ವಾಚಾರ್ಯರ ಹೆಸರಿನ ಒಂದು ದ್ವಾರ ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಭಗವದ್ಗೀತೆಯ ಈ ಅಭಿಯಾನ ಸನಾತನ ಪರಂಪರೆಯ ಒಂದು ಸಾಂಸ್ಕೃತಿಕ ಜನಾಂದೋಲನ.

ramabhoomi 2

ಭಾರತದಲ್ಲಿ ವೇದ, ಉಪನಿಷತ್, ಶಾಸ್ತ್ರದ ಜ್ಞಾನವನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ. ಈ ಕಾರ್ಯಕ್ರಮ ಕೂಡ ಭಗವದ್ಗೀತೆಯನ್ನ ಮುಂದಿನ ಪೀಳಿಗೆ ಪರಿಚಯಿಸೋ ಭಾಗವಾಗಿದೆ ಎಂದು ಹೇಳಿದರು. ಶ್ರೀರಾಮಮಂದಿರ ಆಂದೋಲನದಲ್ಲಿ ಉಡುಪಿಯ ಜನರ ಪಾತ್ರ ಇಡೀ ದೇಶಕ್ಕೆ ಗೊತ್ತಿದೆ. ಸ್ವರ್ಗೀಯಾಗಿರುವ ದಿ. ಪೇಜಾವರ ಶ್ರೀಗಳನ್ನ ನಾವು ಸ್ಮರಿಸಲೇಬೇಕು. ಅಲ್ಲದೇ ರಾಮಮಂದಿರ ನಿರ್ಮಾಣ ಉಡುಪಿಗೆ ಮತ್ತೊಂದು ಕಾರಣಕ್ಕೆ ವಿಶೇಷವಾಗಿದೆ. ಹೊಸ ಮಂದಿರದಲ್ಲಿ ಮಧ್ವಾಚಾರ್ಯರ ಹೆಸರಿನ ಒಂದು ದ್ವಾರ ನಿರ್ಮಾಣ ಮಾಡಲಾಗಿದೆ. ರಾಮ ಮಂದಿರ ಪರಿಷತ್‌ನ ಒಂದು ದ್ವಾರ ಮಧ್ವರ ಹೆಸರಿನಲ್ಲಿ ಆಗಿರುವುದು ಉಡುಪಿಗೆ ಮತ್ತೊಂದು ಹೆಮ್ಮೆ. ಜಗದ್ಗುರು ಮಧ್ವಾಚಾರ್ಯರ ಪರಂಪರೆ ಹರಿದಾಸ ಪರಂಪರೆಗಳಲ್ಲಿ ಒಂದು. ಶ್ರೀಕೃಷ್ಣನ ಉಪದೇಶ ಎಲ್ಲಾ ಯುಗಗಳಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದರು.
ಶ್ರೀ ಕೃಷ್ಣನು ಯುದ್ಧಭೂಮಿಯಲ್ಲಿ ಗೀತೆಯ ಧರ್ಮೋಪದೇಶಗಳನ್ನು ನೀಡಿದ. ಶಾಂತಿ ಮತ್ತು ಸತ್ಯವನ್ನು ಪುನಃಸ್ಥಾಪಿಸಲು ದಬ್ಬಾಳಿಕೆಗಾರರನ್ನು ಕೊನೆಗೊಳಿಸುವುದು ಮುಖ್ಯ ಎಂದು ಭಗವದ್ಗೀತೆ ನಮಗೆ ಕಲಿಸುತ್ತದೆ. ಇದು ರಾಷ್ಟ್ರೀಯ ಭದ್ರತಾ ನೀತಿಯ ಸಾರ. ಈ ಹಿಂದಿನ ಸರ್ಕಾರಗಳು ಭಯೋತ್ಪಾದಕ ದಾಳಿಗಳಿಗೆ ಪ್ರತೀಕಾರ ತೀರಿಸಿಕೊಳ್ಳಲಿಲ್ಲ. ಆದರೆ ಇಂದಿನದು ಹೊಸ ಭಾರತ. ಶಾಂತಿ ಸ್ಥಾಪಿಸುವುದು ಹೇಗೆ ಹಾಗೂ ಅದರ ರಕ್ಷಣೆ ಹೇಗೆಂದು ನಮಗೆ ಗೊತ್ತಿದೆ ಎಂದು ಪ್ರಧಾನಿ ತಿಳಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ