ಜಾಗೀರ್ದಾರ್*

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ ನಿರ್ಮಾಣದ, ಅನೂಪ್ ಭಂಡಾರಿ ನಿರ್ದೇಶನದ ಬ್ಲಾಕ್‌ಬಸ್ಟರ್ ಚಲನಚಿತ್ರ 'ರಂಗಿತರಂಗ', ಈಗ ಹತ್ತು ವರ್ಷಗಳ ನಂತರ ಮತ್ತೆ ತೆರೆಗೆ ಬರಲು ಸಜ್ಜಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

*ನಿರ್ಮಾಪಕ ಎಚ್.ಕೆ. ಪ್ರಕಾಶ್: "ಹತ್ತು ವರ್ಷಗಳ ನಂತರವೂ 'ರಂಗಿತರಂಗ' ಪ್ರಕಾಶ್ ಎಂದೇ ಗುರುತಿಸುತ್ತಾರೆ!"*
range1

"ನಾನು ನಿರೂಪ್ ನಟಿಸಿದ್ದ ಒಂದು ಟೆಲಿಫಿಲಂ ನೋಡಿ ಮೆಚ್ಚಿಕೊಂಡಿದ್ದೆ. ಅವರೊಂದಿಗೆ ಸಿನಿಮಾ ಮಾಡಬೇಕೆಂದು ನಿರೂಪ್ ಅವರ ತಂದೆ ಸುಧಾಕರ್ ಭಂಡಾರಿ ಅವರನ್ನು ಸಂಪರ್ಕಿಸಿದಾಗ, ಅವರು ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದ ಪ್ರೀ-ಪ್ರೊಡಕ್ಷನ್‌ನಲ್ಲಿ ತೊಡಗಿಸಿಕೊಂಡಿದ್ದರು. ಆಗ ಅನೂಪ್ ಅವರ ಬಳಿ ಕಥೆ ಕೇಳಿದೆ. ಹಾಡುಗಳನ್ನು ಕೇಳಿದ ಕೂಡಲೇ ಈ ಸಿನಿಮಾ ನಾನೇ ಮಾಡಬೇಕು ಎಂದು ತೀರ್ಮಾನಿಸಿದೆ. ಆ ಚಿತ್ರವೇ 'ರಂಗಿತರಂಗ'. ಯಶಸ್ಸಿನ ಉತ್ತುಂಗಕ್ಕೇರಿ ಈಗ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಚಿತ್ರದಿಂದಾಗಿ, ಹತ್ತು ವರ್ಷಗಳ ನಂತರವೂ ನನ್ನನ್ನು 'ರಂಗಿತರಂಗ' ಪ್ರಕಾಶ್ ಎಂದೇ ಗುರುತಿಸುತ್ತಾರೆ. ನಿಮ್ಮೆಲ್ಲರ ಪ್ರೋತ್ಸಾಹದೊಂದಿಗೆ, 2025ರ ಜುಲೈ 4 ರಂದು 'ರಂಗಿತರಂಗ' ಚಿತ್ರವನ್ನು ಮರು-ಬಿಡುಗಡೆ ಮಾಡುತ್ತಿದ್ದೇವೆ," ಎಂದು ನಿರ್ಮಾಪಕ ಎಚ್.ಕೆ. ಪ್ರಕಾಶ್ ಹೇಳಿದರು.

range2

*ನಿರ್ದೇಶಕ ಅನೂಪ್ ಭಂಡಾರಿ: "ಅಮೆರಿಕಾದಲ್ಲಿ ಕನ್ನಡಕ್ಕೆ ಹೊಸ ಮಾರುಕಟ್ಟೆ ಸೃಷ್ಟಿಸಿತು!"*

"ವಿದೇಶದಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದ ನಾನು ಹಾಲಿವುಡ್ ಸ್ಟಾರ್ ರಸೆಲ್ ಹಾರ್ವರ್ಡ್ ಅವರೊಂದಿಗೆ ಅಂತರರಾಷ್ಟ್ರೀಯ ಕಿರುಚಿತ್ರಗಳನ್ನು ಮಾಡಿದ್ದೆ. 'ರಂಗಿತರಂಗ'ದ ಪ್ರೀ-ಪ್ರೊಡಕ್ಷನ್ ಕಾರ್ಯದಲ್ಲಿರುವಾಗ, ಈ ಚಿತ್ರ ನಾನೇ ಮಾಡಬೇಕೆಂದು ಎಚ್.ಕೆ. ಪ್ರಕಾಶ್ ಅವರ ಆಸೆಯನ್ನು ನೋಡಿ ಅವರ ಉತ್ಸಾಹಕ್ಕೆ ಕೈಜೋಡಿಸಿದೆ. ಸಾಯಿಕುಮಾರ್ ಅವರನ್ನು ಹೊರತುಪಡಿಸಿ, ಬಹುತೇಕ ಎಲ್ಲ ಕಲಾವಿದರು ಹೊಸಬರಾಗಿದ್ದರು. ನಿರೂಪ್ ಭಂಡಾರಿ, ರಾಧಿಕಾ ಚೇತನ್, ಅವಂತಿಕಾ ಶೆಟ್ಟಿ, ಅರವಿಂದ್ – ಎಲ್ಲರ ಸಂಘಟಿತ ಶ್ರಮವೇ ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣ. ಛಾಯಾಗ್ರಾಹಕ ವಿಲಿಯಂ ಡೇವಿಡ್ ನನ್ನ ಕಲ್ಪನೆಗೆ ಸೂಕ್ತ ದೃಶ್ಯಗಳನ್ನು ಸಂಯೋಜಿಸಿ ಯಶಸ್ಸಿಗೆ ಕಾರಣರಾದರು.

range3

2015ರ ಜುಲೈ 3ರಂದು ನಮ್ಮ ಚಿತ್ರ ಬಿಡುಗಡೆಯಾದಾಗ, ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ 'ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ' ಎಂದು ಹೆದರಿಸಿದ್ದರು. ಆದರೆ, ನಮ್ಮ ನಿರ್ಮಾಪಕರಿಗೆ ಚಿತ್ರ ಗೆಲ್ಲುತ್ತದೆ ಎಂಬ ಬಲವಾದ ನಂಬಿಕೆ ಇತ್ತು, ಅದು ಸುಳ್ಳಾಗಲಿಲ್ಲ. ಜನ ನಮ್ಮ ಕೈ ಹಿಡಿದರು. 'ಬಾಹುಬಲಿ', 'ಬಜರಂಗಿ ಭಾಯಿಜಾನ್', 'ಶ್ರೀಮಂತುಡು' ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಸೂಪರ್ ಹಿಟ್ ಆಯಿತು. 'ರಂಗಿತರಂಗ'ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ 'ರಂಗಿತರಂಗ' ಈ ಜುಲೈ 4 ರಂದು ಮರು-ಬಿಡುಗಡೆಯಾಗುತ್ತಿದೆ. ಮತ್ತೆ ನಮ್ಮ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ," ಎಂದು ನಿರ್ದೇಶಕ ಅನೂಪ್ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ