ಜಾಗೀರ್ದಾರ್*

ಈ ಸಂತಸದ ಸಂಗತಿಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ದಿಲ್ಜಿತ್, ಮೂಲ ‘ಕಾಂತಾರ’ ಸಿನಿಮಾ ತಮ್ಮ ಮೇಲೆ ಮಾಡಿದ ಪರಿಣಾಮವನ್ನು ಸ್ಮರಿಸಿದ್ದಾರೆ. “ದೊಡ್ಡಣ್ಣ ರಿಷಬ್ ಶೆಟ್ಟಿ ಅವರಿಗೆ ನನ್ನ ಸಲಾಂ. ಅವರು ನಿಜಕ್ಕೂ ಒಂದು ಮಾಸ್ಟರ್‌ಪೀಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಆ ಸಿನಿಮಾದೊಂದಿಗೆ ನನಗೆ ವೈಯಕ್ತಿಕ ನಂಟಿದೆ, ಅದನ್ನು ಹೇಳಲು ಸಾಧ್ಯವಿಲ್ಲ. ಆದರೆ, ಚಿತ್ರಮಂದಿರದಲ್ಲಿ ‘ವರಾಹ ರೂಪಂ’ ಹಾಡು ಬಂದಾಗ, ಆನಂದ ಭಾಷ್ಪದಿಂದ ಕಣ್ಣು ತುಂಬಿಕೊಂಡಿದ್ದೆ” ಎಂದು ಭಾವುಕರಾಗಿ ಬರೆದಿದ್ದಾರೆ.

ಅಕ್ಟೋಬರ್ 2 ರಂದು ಬಿಡುಗಡೆಯಾಗಲಿರುವ ಈ ಬಹು ನಿರೀಕ್ಷಿತ ಚಿತ್ರಕ್ಕಾಗಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರೊಂದಿಗೆ ಕೆಲಸ ಮಾಡಿದ ಬಗ್ಗೆಯೂ ದಿಲ್ಜಿತ್ ಸಂತಸ ವ್ಯಕ್ತಪಡಿಸಿದ್ದಾರೆ. “ಕೇವಲ ಒಂದೇ ದಿನದಲ್ಲಿ ಅವರಿಂದ ಸಾಕಷ್ಟು ಕಲಿತುಕೊಂಡೆ” ಎಂದು ತಿಳಿಸಿದ್ದಾರೆ.

ದಿಲ್ಜಿತ್ ದೋಸಾಂಜ್ ಮತ್ತು ರಿಷಬ್ ಶೆಟ್ಟಿ ಅವರ ಈ ಮೈತ್ರಿ, ಹೋಂಬಾಳೆ ಫಿಲ್ಮ್ಸ್ ನಿರ್ಮಾಣದ ‘ಕಾಂತಾರ-ಅಧ್ಯಾಯ 1’ ಚಿತ್ರಕ್ಕೆ ಹೊಸ ಸಂಗೀತದ ಸ್ಪರ್ಶ ನೀಡುವುದು ಖಚಿತ.

‘ಕಾಂತಾರ-ಅಧ್ಯಾಯ 1’ ಅಕ್ಟೋಬರ್ 2, 2025 ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ