– ರಾಘವೇಂದ್ರ ಅಡಿಗ ಎಚ್ಚೆನ್.
ಕಾಂತಾರ ಚಾಪ್ಟರ್ 1 ಸಕ್ಸಸ್ ಬೆನ್ನಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡ ಡಿಕೆಶಿ

ಖ್ಯಾತ ನಟ ರಿಷಬ್ ಶೆಟ್ಟಿಯವರು ಇಂದು ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ ‘ಕಾಂತಾರ: ಒಂದು ದಂತಕಥೆ – ಅಧ್ಯಾಯ 1’ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ.

ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಇನ್ನೂ ಎತ್ತರಕ್ಕೆ ಅವರು ಬೆಳೆಯಲಿ ಎಂದು ಶುಭಹಾರೈಸಿದೆ. ಎಂದು ಹೇಳಿದರು.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





