ಸರಸ್ವತಿ *
ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು 'ರೂಬಿ' ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಚೊಚ್ಚಲ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು.
ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಬಳಿಕ ಬರಹಗಾರ ಹಾಗೂ ನಿರ್ದೇಶಕ ಚಂದ್ರಚೂಡ್ ಮಾತನಾಡಿ, ರೂಬಿ ಕಥೆ ಹಾಗೂ ಚಿತ್ರತಂಡ ಚೆನ್ನಾಗಿದೆ. ಒಳ್ಳೊಳ್ಳೆ ಸಿನಿಮಾ ಬರಬೇಕು. ಈ ಹಿಂದೆ ಹಾಡು ಕೇಳಿಸಿದ. ಆ ಹಾಡು ಸೆನ್ಸೇಷನಲ್ ಕ್ರಿಯೇಟ್ ಮಾಡುತ್ತದೆ. ಲಿರಿಕ್ಸ್ ಹಾಗೂ ಮ್ಯೂಸಿಕ್ ಎಲ್ಲವೂ ಚೆನ್ನಾಗಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.
ನಟ ರಾಮ್ ಗೌಡ ಮಾತನಾಡಿ, ರಘು ಅವರು ಬಂದು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯ್ತು. ನನ್ನ ಪಾತ್ರ ಹಾಗೂ ಇಡೀ ತಂಡ ಚೆನ್ನಾಗಿದೆ. ಆರ್ ಪಿ ಸರ್ ಮ್ಯೂಸಿಕ್ ಮಾಡ್ತಾ ಇರುವುದು ನನಗೆ ಖುಷಿಯಾಯ್ತು. ನಿರ್ಮಾಪಕರು ತುಂಬಾ ಫ್ಯಾಷನೇಟ್ ಆಗಿದ್ದಾರೆ. ಚಿತ್ರಕ್ಕೆ ಏನೂ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ ಎಂದರು.
ನಿರ್ದೇಶಕ ರಘು ಕೋವಿ ಮಾತನಾಡಿ, ನನ್ನ ಕನಸಿಗೆ ಇಬ್ಬರು ನಿರ್ಮಾಪಕರು ಸಾಥ್ ಕೊಟ್ಟಿದ್ದಾರೆ. ಒಂದು ಲವ್ ಸ್ಟೋರಿಯನ್ನು ಮ್ಯೂಸಿಕ್ ಮೂಲಕ ಹೇಳಲು ಸಾಧ್ಯವಿದೆ. ಅದನ್ನು ಆರ್ ಪಿ ಪಟ್ನಾಯಕ್ ಅವರಂತಹ ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಹೇಳಿದ್ದಾರೆ. ನಾಯಕ ರಾಮ್ ಕಥೆ ಮತ್ತು ಕಲೆ ಬಗ್ಗೆ ಆಸಕ್ತಿ ಇರುವ ವ್ಯಕ್ತಿ. ಹೈದ್ರಾಬಾದ್ ನಲ್ಲಿ ನಡೆದ ನೈಜ ಘಟನೆಯನ್ನು ರೂಬಿ ಸಿನಿಮಾ ಮೂಲಕ ಹೇಳಲು ಹೊರಟ್ಟಿದ್ದೇವೆ. ಚಿತ್ರದಲ್ಲಿ ಐದು ಹಾಡುಗಳು ಇವೆ. ಶೇಖಡ 50ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ ಎಂದು ಹೇಳಿದರು.

ಸಂಗೀತ ನಿರ್ದೇಶಕ ಆರ್ ಪಿ ಪಟ್ನಾಯಕ್ ಮಾತನಾಡಿ, ಕಥೆ ತುಂಬಾ ಚೆನ್ನಾಗಿದೆ. ಇದು ಕನ್ನಡ ಇಂಡಸ್ಟ್ರಿಯಲ್ಲಿ ಬೆಸ್ಟ್ ಸಿನಿಮಾವಾಗಲಿದೆ. ರಾಮ್-ವೈಭವಿ ರಾಷ್ಟ್ರಪ್ರಶಸ್ತಿ ಸಿಗುವಷ್ಟು ಚೆನ್ನಾಗಿ ನಟಿಸಿದ್ದಾರೆ. ಈ ಮ್ಯೂಸಿಕಲ್ ಚಿತ್ರದ ಭಾಗವಾಗಿ ಇರುವುದು ನನಗೆ ತುಂಬಾ ಖುಷಿ ಇದೆ. ಚಿತ್ರದಲ್ಲಿ ಒಳ್ಳೆ ಟೆಕ್ನಿಷಿಯನ್ ತಂಡವಿದೆ ಎಂದರು.
ರಘು ಕೋವಿ ಜರ್ನಿ
'ನಾದಬ್ರಹ್ಮ' ಹಂಸಲೇಖ ಅವರ ಕಥಾ ಕಣಜದಿಂದ ಸ್ಯಾಂಡಲ್ವುಡ್ಗೆ ಪರಿಚಿತರಾದ ರಘು ಕೋವಿ ಅವರು ಅಜಯ್ ರಾವ್ ನಟನೆಯ 'ಕೃಷ್ಣ ಲೀಲಾ' ಸಿನಿಮಾಗೆ ಸ್ಕ್ರಿಪ್ಟ್ ಬರೆದಿದ್ದರು. ಅದ್ಕಕಾಗಿ ಅವರು ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು. ಈ ಹಿಂದೆ ನಿದೇಶಕರಾದ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಎಂ ಎಸ್ ರಾಜಶೇಖರ್, ಕೆ ವಿ ರಾಜು, ಶಶಾಂಕ್, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ಕೋ- ಡೈರೆಕ್ಟರ್ ಆಗಿ ಕೆಲಸ ಮಾಡಿದ ಅನುಭವ ಇರುವ ರಘು ಕೋವಿ, ಇದೇ ಮೊದಲ ಬಾರಿಗೆ ನಿರ್ದೇಶಕರಾಗಿ ಅಖಾಡಕ್ಕೆ ಇಳಿದಿದ್ದಾರೆ.
ತಾರಾ ಬಳಗದಲ್ಲಿ ಯಾರೆಲ್ಲಾ ಇದ್ದಾರೆ?





