ಬದುಕು ಜಟಕಾಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು.|

ಮದುವೆಗೋ ಮಸಣಕೋ ಹೋಗೆಂದ ಕಡೆ ಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ ||

ಡಿವಿಜಿಯವರು ಅಂದು ಯಾರನ್ನು ತಲೆಯಲ್ಲಿ ಇಟ್ಟುಕೊಂಡು ಈ ಕಗ್ಗವನ್ನು ಬರೆದರೋ ಏನೋ? ಆದರೆ ಈ ಪದ್ಯ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ರಂಗಭೂಮಿ ಮತ್ತು ಚಲನಚಿತ್ರನಟ ಮತ್ತು ನಿರ್ದೇಶಕ ಸಂಚಾರಿ ವಿಜಯ್ ಅವರ ಪಾಲಿಗಂತೂ ಅನ್ವಯವಾಗುತ್ತದೆ ಎಂದರೂ ತಪ್ಪಾಗಲಾರದು. ಕೆಲ ವರ್ಷಗಳ ಹಿಂದೆ, ದಯಾಳ್ ಪದ್ಮನಾಭ್ ಅವರ ನಿರ್ದೇಶನದ ಸತ್ಯಹರಿಶ್ಚಂದ್ರ ಸಿನಿಮಾ ತಿರುವಣ್ಣಾಮಲೈನಲ್ಲಿನ ಚಿತ್ರೀಕರಣದಲ್ಲಿ ವಿಜಯ ಭಾಗವಹಿಸುತ್ತಿದ್ದರು. ಅದೆ ಸಮಯದಲ್ಲಿ ಅವರದ್ದೇ ಆದ ಆರನೇ ಮೈಲಿ ಚಿತ್ರದ ಪೂಜೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ಹಮ್ಮಿಕೊಂಡಿದ್ದು ನಿರ್ಮಾಪಕರು ಬರಲೇ ಬೇಕು ಎಂಬ ಒತ್ತಾಯ ಮಾಡಿದ ಪಲವಾಗಿ ರಾಜನಹಳ್ಳಿಗೆ ಬಂದು ಪೂಜೆ ಮುಗಿಸಿಕೊಂಡು ನಿರ್ಮಾಪಕ ಎ. ಮಂಜು ಅವರ ಕಾರಿನಲ್ಲಿ ಮತ್ತೆ ತಿರುವಣ್ಣಾಮಲೈಗೆ ಹಿಂದಿರಿಗುವ ಸಮಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಾರು ನುಜ್ಜು ಗುಜ್ಜಾಗಿದ್ದರೂ ಅದೃಷ್ಠವಷಾತ್ ವಿಜಯ್ ಹೆಚ್ಚಿನ ಅಪಾಯವಿಲ್ಲದೇ ಪಾರಾದಾಗ, ಎಲ್ಲರೂ ಬೀಸೋ ದೊಣ್ಣೆ ತಪ್ಪಿದರೆ ಸಾವಿರ ವರ್ಷ ಆಯಸ್ಸು ಎಂದು ನಿಟ್ಟುಸಿರು ಬಿಟ್ಟಿದ್ದರು. ಆದರೆ ಮೊನ್ನೆ ಜೂನ್ 12 ಶನಿವಾರ ಜೆಪಿ ನಗರದಲ್ಲಿ ತಮ್ಮ ಗೆಳೆಯನ ಬೈಕ್ನಲ್ಲಿ ಹೆಲ್ಮೆಟ್ ಹಾಕಿಕೊಳ್ಳದೇ ಹೋಗುತ್ತಿರುವಾಗ ಬೈಕ್ ಅಪಘಾತವಾಗಿ ತೊಡೆ ಮತ್ತು ತಲೆಗೆ ತೀವ್ರವಾದ ಪೆಟ್ಟು ಬಿದ್ದ ಕಾರಣ, ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೆದಳು ನಿಶ್ಕ್ರಿಯೆಯಾಗಿ ಜೀವಚ್ಛವವಾಗಿ ಈಗಲೋ ಆಗಲೋ ಎನ್ನುವಂತಾಗಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಅಂದು ಕಾರು ನುಚ್ಚು ನೂರಾದರೂ ಉಳಿಸಿದ್ದ ವಿಧಿ, ಇಂದು ಸಾಧಾರಣಗಿ ಬೈಕ್ ಜಾರಿದ್ದಕ್ಕೆ ಸೀದಾ ಮಸಣದ ದಾರಿ ತೋರಿಸಿರುವುದು, ನಂಬಲಾರದಾಗಿದೆ.

vij7

ಬಿ. ವಿಜಯ್ ಕುಮಾರ್ ಎಂಬ ಸುಸಂಪನ್ನ, ವಿದ್ಯಾವಂತ ಸುರದ್ರೂಪಿ ತರುಣ ಸಂ‍ಚಾರಿ ವಿಜಯ್ ಆಗಿದ್ದರ ಹಿಂದೆಯೂ ಒಂದು ರೋಚಕ ಕಥೆ ಇದೆ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಬಿಇ ಮುಗಿಸಿ ಕೆಲಸವನ್ನು ಅರಸಿ ಬೆಂಗಳೂರಿಗೆ ಬಂದು ಕೆಲ ಕಾಲ ಕೆಐಇಟಿ ಶಿಕ್ಷಣ ಸಂಸ್ಥೆಯಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಲೇ ನಟನಾಗ ಬೇಕೆಂಬ ಅಸೆಯಿಂದ ಸಂಜೆಯ ಹೊತ್ತಿನಲ್ಲಿ ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ರಂಗಭೂಮಿಯ ನಟನೆಯಲ್ಲಿ ನಿರತರಾಗುತ್ತಿದ್ದಂತೆಯೇ ಎರಡು ದೋಣಿಯ ಮೇಲೆ ಕಾಲು ಇಡುವುದು ಸರಿಯಲ್ಲ ಎಂದು ನಿರ್ಧರಿಸಿ,ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಸಲುವಾಗಿ ಇದ್ದ ಕೆಲಸಕ್ಕೆ ರಾಜೀನಾಮೆ ಕೊಟ್ಟು ಸಂಪೂರ್ಣವಾಗಿ ರಂಗಭೂಮಿಯಲ್ಲಿ ತೊಡಗಿಕೊಳ್ಳುತ್ತಾರೆ. ಆಗಾಗಲೇ ಖ್ಯಾತಿ ಪಡೆದಿದ್ದ ಸಂಚಾರಿ ಎಂಬ ಹೆಸರಿನ ನಾಟಕ ತಂಡದ ಅವಿಭಾಜ್ಯ ಅಂಗವಾಗಿ ಸುಮಾರು ಹತ್ತು ವರ್ಷಕ್ಕೂ ಅಧಿಕವಾಗಿ ಕಾಲ ಕಳೆದದ್ದರಿಂದ ಅವರು ಸಂಚಾರಿ ವಿಜಯ್ ಎಂದೇ ಖ್ಯಾತಿಯನ್ನು ಪಡೆಯುತ್ತಾರೆ. ಸಂಚಾರಿ ನಾಟಕ ತಂಡವಲ್ಲದೇ ನಾಡಿನ ಹಲವಾರು ತಂಡಗಳೊಂದಿಗೆ ಲೆಕ್ಕವಿಲ್ಲದಷ್ಟು ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೇ, ಅದರ ಜೊತೆ ಜೊತೆಯಲ್ಲಿಯೇ ಕನ್ನಡದ ವಿವಿಧ ಛಾನೆಲ್ಲುಗಳ ಧಾರಾವಾಹಿಗಳಲ್ಲದೇ ಅಲ್ಲೊಂದು ಇಲ್ಲೊಂದು ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಲ್ಲದೇ, ಒಂದೆರಡು ನಾಟಕಗಳನ್ನು ಸಹ ನಿರ್ದೇಶಿಸಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ