Mysore Sandal Soap ಒಂದು ಎಮೋಷನ್ ಎಂದ ತಮನ್ನಾ... ಮೈಸೂರು ಸ್ಯಾಂಡಲ್ ಗೆ ತಮನ್ನಾ ರಾಯಭಾರಿ.
Mysore Sandal Soap ಹೊಸ ರೂಪವನ್ನ ಬಿಡುಗಡೆ ಮಾಡಿದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ
- ರಾಘವೇಂದ್ರ ಅಡಿಗ ಎಚ್ಚೆನ್.
ತಾಜ್ ವೆಸ್ಟ್ ಎಂಡ್ ಹೋಟೆಲಿನ ಝಗಮಗಿಸುವ ಸಭಾಂಗಣದಲ್ಲಿ ಬಹುಭಾಷಾ ನಟಿ ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್ಡಿಎಲ್ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್ಡಿಎಲ್ ಹೊಸ ಯುಗಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜರುಗಿದ ಸಮಾರಂಭದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಬೆಳೆದು ಬಂದ ಹಾದಿಯನ್ನು ಬಿಂಬಿಸುವ ಸುಗಂಧ ಸಿರಿ ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು. ಮುದ್ದೇಬಿಹಾಳದ ಶಾಸಕರು ಹಾಗೂ KSDL ಅಧ್ಯಕ್ಷರಾದ ಶ್ರೀ ಸಿ.ಎಸ್ ಅಪ್ಪಾಜಿ ನಾಡಗೌಡ, ಕೈಗಾರಿಕಾ ಇಲಾಖೆ, KSDL, MSIL ಅಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಇಂದಿನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮೈಸೂರು ಸ್ಯಾಂಡಲ್ ಸೋಪ್ನ ಪ್ಯಾಕೆಟ್ ಹೊಚ್ಚಹೊಸ ರೂಪ ತಾಳಿದೆ ಜೊತೆಗೆ ಮೈಸೂರು ಸ್ಯಾಂಡಲ್ ಸೋಪ್ ಜತೆಗೆ ಸಂಸ್ಥೆಯ 57 ಉತ್ಪನ್ನಗಳನ್ನು ನಟಿ ತಮನ್ನಾ ಸೇರಿದಂತೆ ಗಣ್ಯರು ಬಿಡುಗಡೆ ಮಾಡಿದರು. ಹೀಗೆ ನವನವೀನ ಪ್ಯಾಕಿಂಗ್ ಪಡೆದುಕೊಂಡಿರುವ ಉತ್ಪನ್ನಗಳಲ್ಲಿ ಗಂಧದ ಎಣ್ಣೆ, ಮಲ್ಲಿಗೆ (ಜಾಸ್ಮೀನ್) ಪರಿಮಳದ ಸೋಪು, ಸುಗಂಧದ್ರವ್ಯ, ಟೂತ್ ಪೇಸ್ಟ್, ಕೊಬ್ಬರಿ ಎಣ್ಣೆ, ಪೆಟ್ರೋಲಿಯಂ ಜೆಲ್ಲಿ, ಸಾವಯವ ಉತ್ಪನ್ನಗಳವರೆಗೆ 60 ಉತ್ಪನ್ನಗಳಿವೆ. ಜೊತೆಗೆ ತಮನ್ನಾ, ಸಂಸ್ಥೆಯ ಪರವಾಗಿ ನಡೆಸಿರುವ ಪ್ರಚಾರದ ಹತ್ತಾರು ಜಾಹೀರಾತುಗಳು ಕೂಡ ಬಿಡುಗಡೆಯಾದವು. ಇದೇ ಸಂದರ್ಭದಲ್ಲಿ ಸಂಸ್ಥೆಯ ಇತಿಹಾಸವನ್ನು ಕಟ್ಟಿಕೊಡುವ ʻಸುಗಂಧ ಸಿರಿʼ ಮತ್ತು ʻಅರೋಮ್ಯಾಟಿಕ್ ಜರ್ನೀಸ್ʼ ಕಾಫಿ ಟೇಬಲ್ ಪುಸ್ತಕಗಳ ಲೋಕಾರ್ಪಣೆಯೂ ನೆರವೇರಿತು.

ನಟಿ ತಮನ್ನಾ ಮಾತನಾಡಿ, ಮೈಸೂರು ಸ್ಯಾಂಡಲ್ ಸೋಪು ಕೇವಲ ಒಂದು ಸಾಬೂನಲ್ಲ. ಇದರೊಂದಿಗೆ ಭಾವನೆಗಳು, ಬಾಲ್ಯ ಮತ್ತು ಸುಮಧುರ ನೆನೆಪುಗಳೆಲ್ಲ ಹೆಣೆದುಕೊಂಡಿವೆ. ಇದು ಪರಿಪೂರ್ಣತೆ ಮತ್ತು ಸತ್ಯಗಳ ಸಂಗಮ. ಮಾರುಕಟ್ಟೆಯಲ್ಲಿ ಇದಕ್ಕೆ ಸಾಟಿಯಾದ ಇನ್ನೊಂದು ಸೋಪ್ ಇಲ್ಲ. ಮೈಸೂರು ಸ್ಯಾಂಡಲ್ ಸೋಪ್ಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಮುಂದಿನ ಎರಡು ವರ್ಷ ನಾನು ಈ ಗುಣಮಟ್ಟದ ಉತ್ಪನ್ನಗಳ ರಾಯಭಾರಿಯಾಗಿ ಕೆಲಸ ಮಾಡಲಿದ್ದೇನೆ ಎಂದು ಬಣ್ಣಿಸಿದರು
ಬಳಿಕ ಮಾತನಾಡಿದ ಸಚಿವ ಎಂ ಬಿ ಪಾಟೀಲ, ಮಾತನಾಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ನೂರಾ ಎಂಟು ವರ್ಷದ ಹಿಂದೆ ಮೈಸೂರ್ ಸ್ಯಾಂಡಲ್ ಸೋಪ್ ತಯಾರಿಕೆಯನ್ನು ಪ್ರಾರಂಭಿಸಿದರು. ಆಗ ವಿಶ್ವೇಶ್ವರಯ್ಯ ಅವರು ಶಾಸ್ತ್ರಿಅವರಿದ್ದರು. ಆ ವೇಳೆ ನಡೆಯುತ್ತಿದ್ದ ದ್ವಿತೀಯ ಮಹಾಯುದ್ಧದ ಕಾರಣ ಶ್ರೀಗಂಧಕ್ಕೆ ಬೇಡಿಕೆ ಕುಸಿದಿತ್ತು. ಆ ವೇಳೆಗೆ ಶಾಸ್ತ್ರಿಯವರನ್ನು ಲಂಡನ್ ಗೆ ಕಳಿಸಿ ಅಲ್ಲಿ ಶ್ರೀಗಂಧದ ಎಣ್ಣೆ ತೆಗೆಯುವ ಕುರಿತಂತೆ ಅದ್ಯಯನಕ್ಕೆ ಮುಂದಾದರು. ಈ ಸೋಪ್ ಹಾಗೂ ಮೈಸೂರ್ ಸ್ಯಾಡಲ್ ಗೆ ನೂರಾ ಎಂಟು ವರ್ಷ ಇತಿಜಾಸ ಇದ್ದು ನಾನು ಸಚಿವನಾದ ನಂತರ ಇದಕ್ಕೆ ಹೊಸ ರೂಪ ಕೊಡಬೇಕೆಂದು ಬಯಸಿಸೆ. ಇದಕ್ಕೆ ಮುನ್ನ ೧೩ ಕೋಟಿ ವಹಿವಾಟು ನಡೆಸುತ್ತಿದ್ದ ಈ ಕಂಪನಿ ಈಗ ೧೮೦೦ ಕೋಟಿ ರೂ. ವಹಿವಾಟು ತಲುಪಿದೆ. ಅಲ್ಲದೆ ಈ ಹಿಂದೆ ೧೮೨ ಕೋಟಿ ಲಾಭವಿದ್ದದ್ದು ಈಗ ೪೫೦ ಕೋಟಿ ರೂ ಲಾಭ ಬರುತ್ತಿದೆ. ಎಫ್.ಎಂ.ಸಿ.ಸಿ.ಗಳಲ್ಲಿ ಕಾರ್ಪೋರೇಟ್ ಕಂಪನಿಗಳ ಜೊತೆಗೆ ಸ್ಪರ್ಧಿಸಿ ನಾವಿಂದು ನಂಬರ್ ಒನ್ ಆಗಿದ್ದೇವೆ. ಪಿ.ಎಸ್.ಯು. ಆಗಿ ನಾವು ದೊಡ್ಡ ದೊಡ್ಡ ಕಂಪನಿಗಳ ಜೊತೆಗೆ ಸ್ಪರ್ಧಿಸಿ ನಂಬರ್ ಒನ್ ಸ್ಥಾನ ಗಳಿಸಿದ್ದೇವೆ.





