ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ.
ಫಿಲ್ಮ್ ಚೇಂಬರ್ಗೆ ದೂರು ನೀಡಿರುವ ನಿರ್ದೇಶಕ ನಾಗಶೇಖರ್, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೇನೆ. ಆದರೆ, ಇಂತಹ ಸಮಸ್ಯೆ ಯಾವ ನಟಿಯೂ ಮಾಡಿರಲಿಲ್ಲ ಎಂದು ಹೇಳಿದ್ದಾರೆ. ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ. ಹೀಗಾಗಿ ರಚಿತಾ ರಾಮ್ ವಿರುದ್ಧ ನಿರ್ದೇಶಕರು ತಿರುಗಿ ಬಿದ್ದಿದ್ದಾರೆ. ಸಂಜು ವೆಡ್ಸ್ ಗೀತಾ ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರು, ರಚಿತಾ ರಾಮ್ ಸಿನಿಮಾ ಪ್ರಚಾರಕ್ಕೆ ಒಂದು ದಿನವೂ ಸಪೋರ್ಟ್ ಮಾಡಿಲ್ಲ. ರಾಕ್ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ದರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಶಿವಣ್ಣ, ಉಪೇಂದ್ರ, ಸುದೀಪ್ ಅಂತಹವರೇ ಈ ಸಿನಿಮಾವನ್ನು ಬೆಂಬಲಿಸಿದ್ದಾರೆ. ನಾವು ಅವರಿಗೆ ಪೇಮೆಂಟ್ ಕಡಿಮೆಯೇನೂ ಕೊಟ್ಟಿಲ್ಲ. ಹೀಗಾಗಿ ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್ಗೆ ಕಂಪ್ಲೇಂಟ್ ಕೊಟ್ಟಿದ್ದಾರೆ.