ರಾಘವೇಂದ್ರ ಅಡಿಗ ಎಚ್ಚೆನ್.

ಬಾಗಲಕೋಟ ಜಿಲ್ಲೆಯ ಐತಿಹಾಸಿಕ ಸ್ಥಳ ಐಹೊಳೆ ಹತ್ತಿರದ ಸುಕ್ಷೇತ್ರ  ಕಲಾಪೋಷಕರ ಮಠ ಸಿದ್ಧನಕೊಳ್ಳದ ಸಿದ್ಧಶ್ರೀ ರಾಷ್ಟ್ರೀಯ ಉತ್ಸವ-2026 ಜ.14,15,16 ರಂದು ಮೂರು ದಿನಗಳ ಕಾಲ ಜರುಗಲಿದ್ದು ಜ.15 ರಂದು   ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಹುನಗುಂದ ಕ್ಷೇತ್ರದ ಶಾಸಕರಾದ ಡಾ.ವಿಜಯಾನಂದ ಕಾಶಪ್ಪನವರ ಜಾತ್ರಾ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಧರ್ಮಾಧಿಕಾರಿಗಳಾದ ಡಾ. ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
ಸಿದ್ಧಶ್ರೀ ಉತ್ಸವದಲ್ಲಿ ಸಹಸ್ರಾರು ಭಕ್ತರು ಸೇರುತ್ತಿದ್ದು   ಸಂಗೀತ, ನೃತ್ಯ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನೆರವೇರುತ್ತವೆ. ರಾಜ್ಯ, ಹೊರರಾಜ್ಯಗಳ ವಿವಿಧ ಸಾಧಕರು, ಪ್ರತಿಭಾನ್ವಿತ ಉದಯೋನ್ಮುಖ ಕಲಾ ಪ್ರತಿಭೆಗಳಿಗೂ ವೇದಿಕೆ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.15ರಂದು ಹಮ್ಮಿಕೊಳ್ಳಲಾಗಿದೆ. ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಇನ್ನೂ ಬಿಡುಗಡೆಯಾಗದ ತಮ್ಮ 2025 ರಲ್ಲಿ ನಿರ್ಮಾಣವಾದ, ಆಗುತ್ತಿರುವ ಹೊಸ ಚಲನಚಿತ್ರಗಳ, ಟೆಲಿಫಿಲ್ಮ್‌, ಕಿರುಚಿತ್ರಗಳ, ಟ್ರೈಲರ್, ಟೀಸರ್ ಮತ್ತು ಪೋಸ್ಟರಗಳನ್ನು ಚಿತ್ರೋತ್ಸವದಲ್ಲಿ   ಬಿಡುಗಡೆ ಮಾಡಬಹುದು.

siddhashree1

ಯಾವುದೇ ಪ್ರವೇಶ ಶುಲ್ಕಗಳಿಲ್ಲದೆ   ಉಚಿತ   ಅವಕಾಶ ಕಲ್ಪಿಸಲಾಗಿದೆ.  ಭಾಗವಹಿಸಿದ ಚಲನಚಿತ್ರದ ತಂಡಗಳಿಗೆ ಅಭಿನಂದನಾ ಪತ್ರ, ನೆನಪಿನ ಸ್ಮರಣಿಕೆ, ಕಿರುಚಿತ್ರ ತಂಡಗಳಿಗೆ ಅಭಿನಂದನಾ ಪತ್ರಗಳನ್ನು ನೀಡಲಾಗುತ್ತದೆ. ಆಸಕ್ತಿತರು ಡಿಸೆಂಬರ್ 31 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ನಂತರ ಬಂದವರಿಗೆ ಅವಕಾಶವಿಲ್ಲ. ಶ್ರೀಗಳ ಮತ್ತು ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ. ಆಯ್ಕೆಯಾದವರಿಗೆ ನಂತರ ತಿಳಿಸಲಾಗುತ್ತದೆ.  ತಮ್ಮ ಟೀಸರ್, ಟ್ರೈಲರ್, ಪೋಸ್ಟರಗಳನ್ನು ಡಾ.ಪ್ರಭು ಗಂಜಿಹಾಳ, ವಾಟ್ಸಪ್ ನಂ-9448775346 ಇಲ್ಲಿಗೆ ಕಳಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಚಲನಚಿತ್ರೋತ್ಸವ ವಿಭಾಗದ ಡಾ.ಪ್ರಭು ಗಂಜಿಹಾಳ.ಮೊ.9448775346, ಡಾ. ವೀರೇಶ ಹಂಡಿಗಿ. ಮೊ.9060933596, ವೀರೇಶ ಐಹೊಳೆ. ಮೊ.7026062364, ಸಂಗನಗೌಡ್ರು ಕುರುಡಗಿ. ಮೊ.8861811128, ಲೋಕೇಶ ವಿದ್ಯಾಧರ ಮೊ.8762310399 ಇವರನ್ನು ಸಂಪರ್ಕಿಸಬಹುದು  ಎಂದು ಶ್ರೀಗಳು ತಿಳಿಸಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ