- ರಾಘವೇಂದ್ರ ಅಡಿಗ ಎಚ್ಚೆನ್.

ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ಇಂದು ಮದುವೆ ಸಮಾರಂಭ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ಸ್ಮೃತಿ ಮಂಧಾನಾ ಅವರ ತಂದೆ ಶ್ರೀನಿವಾಸ್‌  ಅವರಿಗೆ ಲಘು ಹೃದಯಾಘಾತ  ಸಂಭವಿಸಿದೆ.

ಅನಾರೋಗ್ಯಕ್ಕೆ ಒಳಗಾದ ಬೆನ್ನಲ್ಲೇ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಅಂಬುಲೆನ್ಸ್‌ ಬಂದು ಶ್ರೀನಿವಾಸ್‌ ಅವರನ್ನು ಕರೆದುಕೊಂಡು ಹೋಗಿದೆ. ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.  

ಅರಿಶಿನ ಶಾಸ್ತ್ರದ ವಿಡಿಯೋಗಳಿಂದ ಹಿಡಿದು ವಧು ಮತ್ತು ವರನ ತಂಡಗಳ ನಡುವಿನ ಸ್ನೇಹಪರ ಕ್ರಿಕೆಟ್ ಪಂದ್ಯದವರೆಗೆ, ಮದುವೆಗೆ ಮುನ್ನ ಹಲವು ಮನಮೋಹಕ ಕ್ಷಣಗಳು ಅನಾವರಣಗೊಂಡಿವೆ. ಹೊಸದಾಗಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ, ಸ್ಮೃತಿ ಮತ್ತು ಪಲಾಶ್ ಇಬ್ಬರೂ ಅತ್ಯಂತ ಸುಂದರವಾಗಿ, ಸಂಪೂರ್ಣವಾಗಿ ಕೊರಿಯೋಗ್ರಾಫ್ ಮಾಡಿದ ನೃತ್ಯವನ್ನು ಪ್ರದರ್ಶಿಸಿದ್ದಾರೆ.

ಈ ಮೊದಲು, ಅರಿಶಿನ ಶಾಸ್ತ್ರದಲ್ಲಿ ಸ್ಮೃತಿ ಮತ್ತು ಪಲಾಶ್ ಇಬ್ಬರೂ ಖುಷಿಯಿಂದ ನೃತ್ಯ ಮಾಡಿದ್ದು, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಹ ಸಾಥ್ ನೀಡಿ, ವಧುವಿನ ತಂಡವಾಗಿ ಹೆಜ್ಜೆ ಹಾಕಿರುವ ದೃಶ್ಯಗಳು ಹೆಚ್ಚು ವೈರಲ್ ಆಗಿವೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ