– ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ಗೆ ವೀಕ್ಷಕರಿಗೆ ರಾತ್ರೋ ರಾತ್ರಿ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಎರಡು ದಿನಗಳಿಂದ ನಡೀಯುತ್ತಿದ್ದ ಬಿಗ್ ಡ್ರಾಮಾಕ್ಕೆ ಬ್ರೇಕ್ ಬಿದ್ದಿದೆ. ಜಾಲಿವುಡ್ ಸ್ಟುಡಿಯೋ ಬೀಗ ತೆರೆಯಲು ಸೂಚಿಸಿದ ಡಿಸಿಎಂ ಡಿಕೆಶಿ ಸೂಚಿಸಿದ್ದಾರೆ. ಜಾಲಿವುಡ್ ಸ್ಟುಡಿಯೋ ಬೀಗ ತೆಗೆಯುವಂತೆ ಡಿಸಿಎಂ ಡಿಕೆಶಿ ಸೂಚನೆ ನೀಡುತ್ತಿದ್ದಂತೆ, ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಡಿಸಿಎಂ ಡಿಕೆಶಿಗೆ ಧನ್ಯವಾದ ತಿಳಿಸಿದ್ದಾರೆ.
ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕೆ ಡಿ.ಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ, ಬಿಗ್ಬಾಸ್ ಕನ್ನಡ ಈ ಗೊಂದಲದ ಭಾಗವಾಗಿರಲಿಲ್ಲ, ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ ಡಿಸಿಎಂ ಅವರನ್ನು ನಾನು ನಿಜವಾಗಿಯೂ ಪ್ರಶಂಸಿಸುತ್ತೇನೆ, ಜೊತೆಗೆ ನಲ್ಪಾಡ್ ಅವರ ಪ್ರಯತ್ನಗಳಿಗೆ ಧನ್ಯವಾದಗಳು. – ಎಂದು ಸುದೀಪ್ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಬಿಗ್ಬಾಸ್ ಮನೆ ನಿನ್ನೆ ರಾತ್ರಿಯೇ ಓಪನ್ ಆಗಿದ್ದು, 17 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಒಟ್ಟಾರೆ, ಬಿಗ್ಬಾಸ್ ಮನೆಯ ಬಿಗ್ ಡ್ರಾಮಾಕ್ಕೆ ಕೊನೆಗೂ ಬ್ರೇಕ್ ಬಿದಿದ್ದ, ವೀಕ್ಷಕರಂತು ಫುಲ್ ಖುಷ್ ಆಗಿದ್ದಾರೆ