ಜಾಗೀರ್ದಾರ್* .
ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಮಿಥುನ್ ರೈ ಅವರು ಆಯೋಜಿಸಿದ್ದ “ಪಿಲಿನಲಿಕೆ” ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕಲಾವಿದರಾದ ಕಿಚ್ಚ ಸುದೀಪ್, ಸುನೀಲ್ ಶೆಟ್ಟಿ, ಝೈದ್ ಖಾನ್, ಪೂಜಾ ಹೆಗ್ಡೆ, ಕ್ರೀಡಾಪಟುಗಳಾದ ಅಜಿಂಕ್ಯ ರಹಾನೆ, ಜಿತೇಶ್ ಶರ್ಮ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಪಿಲಿನಲಿಕೆ” (ಹುಲಿ ನೃತ್ಯ)ವನ್ನು ಒಂದು ತಂಡದ ನೃತ್ಯವನ್ನು ಕಂಡು ವೀಕ್ಷಿಸಿ ಬಹಳ ಸಂತೋಷಪಟ್ಟ ನಟ ಝೈದ್ ಖಾನ್ ಅವರು
ಸ್ಥಳದಲ್ಲೇ ಆ ತಂಡಕ್ಕೆ ಎರಡು ಲಕ್ಷ ರೂಪಾಯಿಗಳ ಬಹುಮಾನ ಘೋಷಣೆ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು ಹಾಗೂ ತುಂಬಾ ಸೊಗಸಾಗಿ ಹುಲಿನೃತ್ಯ ಮಾಡಿದ ಹುಡುಗನ ಪ್ರತಿಭೆಗೆ ಮನಸೋತ ಝೈದ್ ಖಾನ್ ಅವರು ಆ ಹುಡುಗನಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಪ್ರಸ್ತುತ ಝೈದ್ ಖಾನ್ ಅವರು ನಾಯಜಕನಾಗಿ ನಟಿಸುತ್ತಿರುವ “ಕಲ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಪ್ರೇಕ್ಷಕರ ಮನ ಗೆದ್ದಿದೆ.