- ರಾಘವೇಂದ್ರ ಅಡಿಗ ಎಚ್ಚೆನ್.
''ಅಪ್ಪಾಜಿ ಅವರು ತಮ್ಮ ಬಯಕೆಯಂತೆ ಸಾಕಷ್ಟು ಸದೃಢರಾಗಿದ್ದ ಸಮಯದಲ್ಲಿಯೇ ನಮ್ಮನ್ನೆಲ್ಲ ಅಗಲಿದರು. ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದ ಅವರು ತಮ್ಮನ್ನು ವಯೋವೃದ್ಧರಾಗಿ, ಗಾಲಿ ಖುರ್ಚಿಯಲ್ಲಿ ನೋಡುವ ಪರಿಸ್ಥಿತಿ ಬರಬಾರದು ಎಂದುಕೊಂಡಿದ್ದರು. ತಮ್ಮ ಇಚ್ಛೆಯಂತೆ ಸಾಕಷ್ಟು ಆರೋಗ್ಯವಂತರಾಗಿದ್ದಾಗಲೇ ನಮ್ಮನ್ನು ಅಗಲಿದರು. ಆದರೆ ಅವರ ವಿಚಾರಗಳು ಇಂದಿಗೂ ಜೀವಂತ'' ಎಂದು ಹಿರಿಯ ನಟ, ರಾಜ್​​ ಪುತ್ರ ರಾಘವೇಂದ್ರ ರಾಜ್​​​ಕುಮಾರ್ ತಂದೆಯನ್ನು ಸ್ಮರಿಸಿದರು. ಎಲ್ಲಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುಲೋಚನ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ.ರಾಜ್​​ಕುಮಾರ್ ಅವರ 96ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕನ್ನಡ ಸಂಸ್ಕತಿಯ ಪ್ರತೀಕವಾಗಿದ್ದರು: ''ಈ ಸಿನಿರಂಗದಲ್ಲಿ ನೂರಾರು ನಟರು, ಸೂಪರ್ ಸ್ಟಾರ್ಸ್​​ ಆಗಮನವಾಗಿದೆ. ಆದರೆ, ಡಾ.ರಾಜ್​​​ಕುಮಾರ್ ಏರಿದ ಎತ್ತರ ತಲುಪೋದು ಕಷ್ಟಸಾಧ್ಯ. ಕನ್ನಡಿಗರಾಗಿ ರಾಜ್​​ ಜನಿಸಿದ್ದು ನಮ್ಮ ನಾಡಿನ ಹೆಮ್ಮೆ ಹಾಗೂ ಪುಣ್ಯ. ಅವರು ಕನ್ನಡ ಸಂಸ್ಕತಿಯ ಪ್ರತೀಕವಾಗಿದ್ದರು'' ಎಂದು ಶಾಸಕ ರಿಜ್ವಾನ್ ಅರ್ಷದ್ ತಿಳಿಸಿದರು.

1200-675-24031326-thumbnail-16x9-newssss
ರಾಜ್​ ಆದರ್ಶ ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಮಾದರಿಯಾಗಬೇಕು': ''ನಟರು ಬದುಕಿದ್ದಾಗ ಅಭಿಮಾನಿಗಳಿರುವುದು ಸಹಜ. ಆದ್ರೆ ರಾಜ್​​ ಮರಣದ ನಂತರವೂ, ಇಂದಿಗೂ ಅಪಾರ ಅಭಿಮಾನಿ ಬಳಗವನ್ನು ಉಳಿಸಿಕೊಂಡಿರುವುದನ್ನು ನೋಡಿದರೆ ಅದೊಂದು ದೇವರು ಕೊಟ್ಟ ವರವೇ ಸರಿ. ಯಾವುದೇ ಜಾತಿ, ಯಾವುದೇ ಧರ್ಮ ಎನ್ನುವುದು ಇಲ್ಲಿ ಇಲ್ಲ. ಎಲ್ಲರೂ ರಾಜ್‍ ಅಭಿಮಾನಿಗಳೇ. ಅವರು ಸರಳ ಸಜ್ಜನಿಕೆ, ವಿನಯವಂತಿಕೆಯ ಆದರ್ಶ ವ್ಯಕ್ತಿಯಾಗಿದ್ದರು. ಅವರ ಆದರ್ಶ ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಮಾದರಿಯಾಗಬೇಕು'' ಎಂದು ತಿಳಿಸಿದರು.
ಯಶಸ್ಸಿನ ಅಮಲನ್ನು ತಲೆಗೇರಿಸಿಕೊಳ್ಳಲಿಲ್ಲ-ಎಸ್.ನಾರಾಯಣ್: ಹಿರಿಯ ಚಲನಚಿತ್ರ ನಿರ್ದೇಶಕ ಎಸ್.ನಾರಾಯಣ್​​​ ಮಾತನಾಡಿ, ''ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗಲೂ ಆ ಯಶಸ್ಸಿನ ಅಮಲನ್ನು ತಲೆಗೆ ಏರಿಸಿಕೊಳ್ಳದೇ ಅತ್ಯಂತ ಸರಳವಾಗಿ ಬದುಕಿದವರು ಡಾ.ರಾಜ್​​ಕುಮಾರ್. ಬೇಡರ ಕಣ್ಣಪ್ಪ, ಕವಿರತ್ನ ಕಾಳಿದಾಸ, ಭಕ್ತ ಕುಂಬಾರ ಸೇರಿದಂತೆ ನಾವು ನೋಡಿರದ ಅನೇಕ ಐತಿಹಾಸಿಕ, ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿ ಅಂತಹ ವ್ಯಕ್ತಿತ್ವಗಳನ್ನು ಕನ್ನಡಿಗರಿಗೆ ಕಟ್ಟಿಕೊಟ್ಟಿದ್ದು ಸಾಮಾನ್ಯ ಸಂಗತಿಯಲ್ಲ'' ಎಂದರು.
ವಿಶಿಷ್ಟ ಛಾಪು ಮೂಡಿಸಿರುವ ತಾರೆ: ''ದೇಶದ ಇತಿಹಾಸದಲ್ಲೇ ಕೆಲವರು ಛಾಪು ಮೂಡಿಸಿರುವಂತೆ ಡಾ.ರಾಜ್​ಕುಮಾರ್ ಅವರು ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಜನಸಾಮಾನ್ಯರ ನೋವು ನಲಿವುಗಳಿಗೆ ರಾಜ್ ಸ್ಪಂದಿಸಿದ ಮಾದರಿಯಲ್ಲಿ ಮತ್ತೊಂದು ಉದಾಹರಣೆ ಇಲ್ಲ. ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಇಡೀ ಜಗತ್ತು ಗುರುತಿಸುವಂತೆ ಬೆಳೆದ ಪರಿ ಸಾಮಾನ್ಯವಾದುದ್ದಲ್ಲ. ಇಂದಿಗೂ ಅವರ ನಟನೆಗೆ, ಗಾಯನಕ್ಕೆ ಮನಸೋಲದವರೇ ಇಲ್ಲ. ನಾಡು, ನುಡಿ, ನೆಲ, ಜಲದ ವಿಷಯ ಬಂದಾಗ ಕನ್ನಡದ ಕಾರ್ಯಕರ್ತನಾಗಿ ಮೊದಲು ಧ್ವನಿ ಎತ್ತಿ, ಚಳವಳಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು'' ಎಂದು ಹೇಳಿದರು.
ಜನರು ಚಿತ್ರಮಂದಿರಕ್ಕೆ ಬರುವುದು ಕಡಿಮೆ ಆಗಿದೆ. ಉತ್ತಮವಾದ ಸಿನಿಮಾಗಳು ರಿಲೀಸ್ ಆದಾಗಲೂ ಜನರು ಥಿಯೇಟರ್​ ಕಡೆಗೆ ಮುಖ ಮಾಡುತ್ತಿಲ್ಲ. ಇದರಿಂದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಬೇಸರ ಆಗುತ್ತದೆ. ಇಂಥ ಪರಿಸ್ಥಿತಿ ಬಂದಿದ್ದರ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ. ‘ಒಮ್ಮೊಮ್ಮೆ ಈ ರೀತಿ ಆಗುತ್ತದೆ. ಆ ಕಾಲದಿಂದಲೂ ಹಾಗೆ ಆಗುತ್ತಿದೆ. ಅದು ಸಡನ್ ಆಗಿ ಸರಿ ಆಗುತ್ತದೆ. ಒಳ್ಳೆಯ ಸಿನಿಮಾಗಳು ಬರುತ್ತವೆ. ಚೆನ್ನಾಗಿ ಪ್ರದರ್ಶನ ಕಾಣುತ್ತವೆ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ