ಸರಸ್ವತಿ*

ಚಲನಚಿತ್ರಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಗರದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು 17ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು. ಕನ್ನಡದ ಮಟ್ಟಿಗೆ ಡಾ. ರಾಜಕುಮಾರ್ ಸಿನಿಮಾಗಳಲ್ಲಿ ಇವೆಲ್ಲವನ್ನೂ ನೋಡುವುದಕ್ಕೆ ಸಾಧ್ಯವಿತ್ತು ಎಂದು ಹೇಳಿದರು.

ಈ ಚಿತ್ರೋತ್ಸವಗಳಿಂದ ಬೇರೆ ದೇಶಗಳ ಜನರ ಜೀವನ, ರಾಜಕೀಯ ಮತ್ತು ಸಮಾಜ ಅರ್ಥವಾಗುತ್ತದೆ. ಅಸಮಾನತೆ, ಸಮಾನತೆ ಅರ್ಥ ಮಾಡಿಕೊಳ್ಳುರವುದು ಅವಶ್ಯಕ. ಅದಕ್ಕೆ ಚಿತ್ರೋತ್ಸವ ಸುವರ್ಣಾವಕಾಶ ಒದಗಿಸುತ್ತದೆ. ಅದನ್ನು ಉಪಯುಕ್ತವಾಗಿ ಬಳಸಿಕೊಂಡು ಸಮಾಜದಲ್ಲಿ ಬದಲಾವಣೆ ತರಬೇಕು. ಬದಲಾವಣೆ ಆಗದಿದ್ದರೆ, ಸಿನಿಮಾ ಬರೀ ಮನರಂಜನೆಗೆ ಸೀಮಿತ ಆಗುತ್ತದೆ.
vasthava 2

ನಾವು ಮನುಷ್ಯರು, ನಾವು ಮಾನವರಾಗಿ ಬಾಳುವುದು ಅವಶ್ಯಕ. ಪ್ರತಿ ವ್ಯಕ್ತಿಯನ್ನು ಪ್ರೀತಿಯಿಂದ, ಸ್ನೇಹದಿಂದ ಕಾಣಬೇಕು. ಆಗ ಮಾತ್ರ ಸಮಸಮಾಜ ಕಟ್ಟುವುದಕ್ಕೆ ಸಾಧ್ಯ. ಬೇಧ, ಭಾವ, ಅಸಮಾನತೆ ಹೋಗಲಾಡಿಸುವ ಕೆಲಸ ಸಿನಿಮಾದ ಮೂಲಕ ಮಾಡಬೇಕು. ನಮ್ಮ ಸರ್ಕಾರ ಚಲನಚಿತ್ರ ಅಭಿವೃದ್ಧಿಗೆ ಸಹಕಾರ, ಬೆಂಬಲ ಕೊಡುತ್ತದೆ. ಬದುಕನ್ನು ಹಸನು ಮಾಡುವ ಕೆಲಸ ಚಲನ ಚಿತ್ರಗಳು ಮಾಡಲಿ ಎಂದು ಚಿತ್ರೋತ್ಸವಕ್ಕೆ ಶುಭ ಹಾರೈಸಿದರು.

ಇಂದಿನಿಂದ ಫೆಬ್ರವರಿ 6 ರ ವರೆಗೆ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಸುಮಾರು 70 ದೇಶಗಳ ಆಯ್ದ ಸುಮಾರು 240 ಸಿನಿಮಾ ಪ್ರದರ್ಶನ ನಡೆಯಲಿದ್ದು, ದೇಶ-ವಿದೇಶಗಳ ಅಪರೂಪದ ಈ ಚಲನಚಿತ್ರಗಳನ್ನು ವೀಕ್ಷಿಸುವ ಅವಕಾಶವಿದೆ. ಜಗತ್ತಿನ ಪ್ರಸಿದ್ಧ ಜನಮನ್ನಣೆಗಳಿಸುರುವ 100 ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಹಾಗೂ 30 ಕ್ಕೂ ಹೆಚ್ಚು ವಿವಿಧ ಭಾರತೀಯ ಭಾಷೆಗಳ ಚಲನಚಿತ್ರ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಾತನಾಡಿ ಇಡಿ ದೇಶದಲ್ಲಿ ಹೆಮ್ಮೆ ಪಡುವಂತ ಕಾರ್ಯಕ್ರಮ ಈ ಚಲನಚಿತ್ರೋತ್ಸವ, ಕಲಾವಿದರ ಕುರಿತು ಮುಖ್ಯಮಂತ್ರಿಗಳಿಗೆ ಹೆಚ್ಚಿನ ಕಾಳಜಿ ಇದೆ. ಸಿನಿಮಾ ನೋಡುವಾಗ ಕನಿಷ್ಟ ನಾವು ನೆಮ್ಮದಿಯಿಂದ ಮೂರು ತಾಸು ಕಳೆಯುತ್ತೇವೆ, ಟಿವಿ ಮೋಬೈಲ್ ಗಳ ಹಾವಳಿಯಿಂದ ಇಂದು ಸಿನಿಮಾ ಕ್ಷೇತ್ರ ಸಮಸ್ಯೆಯಲ್ಲಿದೆ ಎಂದು ಹೇಳಿ ಹಳೆ ಸಿನಿಮಾಗಳನ್ನು ಸ್ಮರಿಸಿಕೊಂಡ ಅವರು ಈ ಚಿತ್ರೋತ್ಸದಲ್ಲಿ ಸಿನಿಮಾಗಳ ಪ್ರದರ್ಶನದ ಜೊತೆ ಸಿನಿಮಾ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯಲಿ ಎಂದರು.

ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾಧ್ಯವಾದ ಸಹಾಯವನ್ನು ಹಾಗೂ ಸಹಕಾರವನ್ನು ನೀಡಲಾಗುವುದು. ಇಂತಹ ಕಾರ್ಯಕ್ರಮಗಳಲ್ಲಿ ನಡೆಯುವ ವಿಚಾರಗಳಿಗೆ ಸ್ಪಂದಿಸಲಾಗುವುದು, ಕಾರ್ಯಕ್ರಮ ಸಾರ್ಥಕತೆಗೆ ಶ್ರಮಿಸುವಂತೆ ಸಿನಿಮಾಸಕ್ತರಿಗೆ ಕರೆ ನೀಡಿದರು.

vasthava 1

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಅವರು ಮಾತನಾಡಿ ನಮ್ಮ ಸರ್ಕಾರದವತಿಯಿಂದ ಅದ್ಭುತವಾದ ಚಲನಚಿತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ, ಸಿನಿಮಾ ಸಮಾಜದ ಒಂದು ಭಾಗ, ಪ್ರತಿ ವಿಷಯದಲ್ಲಿ ಸಿನಿಮಾ ಕೊಡುಗೆ ಅಪಾರವಾಗಿದೆ, ಎಷ್ಟೇ ಕಷ್ಟದಲ್ಲಿದ್ದರು ಸಹ ಜನರಿಗೆ ಸಿನಿಮಾ ಮನರಂಜನೆ ನೀಡುತ್ತದೆ, ಇದೊಂದು ಅತ್ಯಂತ ಪ್ರಭಾವಶಾಲಿ ಮಾಧ್ಯಮ ಆಗಿದ್ದು, ಸಿನಿಮಾ ಮುಖಾಂತರ ಮನುಷ್ಯ ಮತ್ತು ಮನುಷ್ಯತ್ವವನ್ನು ಬೆಸೆಯುವ ಕೆಲಸವಾಗಬೇಕು, ಸಿನಿಮಾ ಕ್ಷೇತ್ರ ಮರೆತಿರುವುದನ್ನು ಮತ್ತೇ ಮರುಕಳಿಸಲಿ, ಪ್ರಕಾಶ್ ರೈ ಕೇವಲ ನಟರಲ್ಲ ಅವರೊಬ್ಬ ಮಾನವೀಯ ಕಾಳಜಿಯುಳ್ಳ ಜವಾಬ್ಧಾರಿ ಯುತ ನಾಗರೀಕ ಎಂದು ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ