- ರಾಘವೇಂದ್ರ ಅಡಿಗ ಎಚ್ಚೆನ್.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆದ ಯುದ್ಧದ ಪರಿಣಾಮ ಎಲ್‌ಪಿಜಿ ಗ್ಯಾಸ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಚಾಲಕರ ನೆರವಿಗೆ ಹಿರಿಯ ನಟ ವಿನೋದ್ ರಾಜ್ ಮುಂದಾಗಿದ್ದಾರೆ. ಸಂಕಷ್ಟದಲ್ಲಿದ್ದ ಚಾಲಕರ ಸ್ಥಿತಿ ಕಂಡು ಮಾನವೀಯತೆ ಮೆರೆದ ಅವರು ನೂರಾರು ಮಂದಿಗೆ ಸಹಾಯ ಹಸ್ತ ಚಾಚಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಪ್ರದೇಶದಲ್ಲಿರುವ ತಮ್ಮ ತಾಯಿ ಡಾ. ಲೀಲಾವತಿ ಅವರ ಸಮಾಧಿ ಬಳಿ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ ಮಾಡಲಾಗಿದೆ. ತಾಯಿ ಹೆಸರಿನಲ್ಲಿ ಊಟ ವ್ಯವಸ್ಥೆ ಮಾಡಿ, ಸಂಕಷ್ಟದಲ್ಲಿದ್ದವರಿಗೆ ಅಗತ್ಯ ನೆರವು ಒದಗಿಸುವ ಮೂಲಕ ವಿನೋದ್ ರಾಜ್ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.

ಆಟೋ ಚಾಲಕರ ಸಮಸ್ಯೆಯನ್ನು ಮನಗಂಡು ಕೈಲಾದ ಸಹಾಯ ನೀಡಿದ ಅವರ ಈ ಕಾರ್ಯಕ್ಕೆ ಚಾಲಕರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ತೋರಿದ ಈ ಮಾನವೀಯ ನಡೆಗೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ