ಸರಸ್ವತಿ ಜಾಗೀರ್ದಾರ್*

ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ 'ಮನದ ಕಡಲು' ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆದ್ರೂ ಅಚ್ಚರಿಯಿಲ್ಲ. ಹಿಂದೆ 'ರಂಗ SSLC' ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ - ರಮ್ಯಾ ಅದ್ಭುತ ಅಭಿನಯ ಮಾಡಿದ್ರು. ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ಒಟ್ಟಾಗಿ‌ ಕೆಲಸ ಮಾಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ.

'ಮನದ ಕಡಲು' ನಿರ್ಮಾಪಕರುಗಳಾದ ಇ.ಕೃಷ್ಣಪ್ಪ ಮತ್ತು ಜಿ.ಗಂಗಾಧರ್ ಅವರೇ ರಮ್ಯಾ‌ -ಯೋಗರಾಜ್ ಭಟ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲು ಆಸೆ ವ್ಯಕ್ತಪಡಿಸಿದ್ದಾರೆ. ರಮ್ಯಾ ಒಡೆತನದ ಆ್ಯಪಲ್ ಬಾಕ್ಸ್ ಸಹಯೋಗದಲ್ಲಿ ಇ.ಕೆ.ಎಂಟರ್ ಟೈನರ್ ನಡಿ ಈ ಸಿನಿಮಾ ಸಿದ್ಧವಾಗಲಿದೆ. ಈ ಬಗ್ಗೆ ರಮ್ಯಾ ಅವರೆ ಆಸಕ್ತಿದಾಯಕವಾಗಿ ಮಾತನಾಡಿದ್ದಾರೆ. 'ಮನದ ಕಡಲು' ಸಿನಿಮಾದ ನೀಲಿ ನೀಲಿ ಕಡಲು ಎಂಬುವ ಹಾಡನ್ನ ಬಿಡುಗಡೆ ಮಾಡುವ ಸಂದರ್ಭದಲ್ಲಿ ರಮ್ಯಾ ಈ ಮಾತನ್ನ ಆಡಿದ್ದಾರೆ. ಮಾರ್ಚ್ 28 ರಂದು 'ಮನದ ಕಡಲು' ಸಿನಿಮಾ ಬಿಡುಗಡೆಯಾದ ನಂತರ ರಮ್ಯಾ- ಯೋಗರಾಜ್ ಭಟ್ ಕಾಂಬೋ ಸಿನಿಮಾದ ಶುರುವಿನ ಸುದ್ದಿ ಕೇಳಬಹುದು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ