ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ

ಶಾಂತಪುರ ಕ್ರಾಸ್ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿಆರ್‌ಎಲ್ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ.

EXTR

ಡಿಕ್ಕಿಯ ತೀವ್ರತೆಯಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರು ಬೆಂಕಿಗಾಹುತಿಯಾಗಿ ಸಜೀವ ದಹನಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದ ಬಳಿಕ ಬಸ್‌ ಹಾಗೂ ಕಾರು ಎರಡೂ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನೆಯ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಆದರೆ, ಕಾರಿನಲ್ಲಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ