ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಶುಕ್ರವಾರ ಮೈನಿಂಗ್ ಇಬ್ಬರು ಪಾದಾಚಾರಿಗಳ ಮೇಲೆ ಹರಿದು ಬಳಿಕ ಪಲ್ಟಿಯಾಗಿದ್ದು, ಇಬ್ಬರೂ ಮೃತಪಟ್ಟಿದ್ದಾರೆ.
ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





