ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇ ನಲ್ಲಿ ಸುಧಾರಣೆ ಕೈಗೊಳ್ಳಲು ಕೇಂದ್ರ ಸರ್ಕಾರ 712 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ ಯದುವೀರ್‌, ಈ ಅನುದಾನದಿಂದ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದಿದ್ದಾರೆ.

ದಶಪಥದಲ್ಲಿ ಹೊಸದಾಗಿ ಎಂಟ್ರಿ-ಎಕ್ಸಿಟ್‌, ರೈಲ್ವೆ ಸೇತುವೆ, ಅಂಡರ್‌ಪಾಸ್‌, ಓವರ್‌ಪಾಸ್‌, ಸರ್ವೀಸ್‌ ರಸ್ತೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ಅನೇಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ದಶಪಥ ಕೊನೆಗೊಳ್ಳುವ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಫ್ಲೈ ಓವರ್‌ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ದೂರು ಸಲ್ಲಿಸಿದ್ದರು. ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ, ಈ ದಶಪಥ ಜನರಿಗೆ ಇನ್ನಷ್ಟು ಉಪಯುಕ್ತವಾಗಬೇಕು ಎಂಬುದನ್ನು ಮನಗಂಡು ಕೇಂದ್ರ ಸರ್ಕಾರ ಸುಧಾರಣೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಯದುವೀರ್ ತಿಳಿಸಿದ್ದಾರೆ.

ಎಕ್ಸ್‌ಪ್ರೆಸ್‌ ವೇನಲ್ಲಿ ಯೋಜನೆಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಸಮಸ್ತ ಜನರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ