ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ನೂತನ ಚೆನ್ನೈ ಎಕ್ಸ್ಪ್ರೆಸ್ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಐಷಾರಾಮಿ ಕಾರು ಅಪಘಾತಕ್ಕೀಡಾಗ್ತಿದ್ದಂತೆ, ಕಾರಿನ ಚಾಲಕ ಪರಾರಿಯಾಗಿದ್ದಾನೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ, ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರು ಚಾಲಕನ ಅಜಾಗರೂಕತೆ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





