ಅತಿಯಾದ ಮಳೆಯಿಂದ ಸೇಡಂ ತಾಲೂಕಿನಲ್ಲಿ ಹಾನಿಯಾದ ಹೆಸರು ಬೆಳೆಯನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಣೆ ಮಾಡಿದರು.

ಸತತವಾಗಿ ಸುರಿದ ಮಳೆಯಿಂದ ಬೆಳೆ ನಷ್ಟದಲ್ಲಿ ಪ್ರಮುಖ ಹೊಲಗಳಿಗೆ ತೆರಳಿದ ಸಚಿವ ಶರಣಪ್ರಕಾಶ ಪಾಟೀಲ ಅವರು ಹೆಸರು ಹಾಗೂ ತೊಗರಿ ಬೆಳೆಗಳನ್ನು ಪರಿಶೀಲನೆ ನಡೆಸಿದರು.ಸೇಡಂ ತಾಲೂಕಿನ ಕಲಕಂಭ ಹಾಗೂ ಅಳ್ಳೊಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ರೈತರ ಅಭಿಪ್ರಾಯಗಳನ್ನು ಆಲಿಸಿದರು. ಜೊತೆಯಲ್ಲಿದ್ದ ಕೃಷಿ ಅಧಿಕಾರಿಗಳಿಗೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿಯನ್ನು ನೀಡುವಂತೆ ಸೂಚಿಸಿದರು.

ಈ ಸಂದರ್ಭ ಗ್ಯಾರಂಟಿ ಅನುಷ್ಠಾನದ ತಾಲೂಕಾಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಕೃಷಿ ಸಮಾಜ ಅಧ್ಯಕ್ಷ ಬಸವಾರಜ ರೇವಗೊಂಡ, ಕೃಷಿ ಸಮಾಜದ ರಾಜ್ಯ ಸದಸ್ಯ ಬಸವರಾಜ ಪಾಟೀಲ ಊಡಗಿ ಸೇರಿದಂತೆ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ