ಗ್ರಾಮೀಣ ಯುವ ಸಮೂಹವನ್ನು ಸಬಲೀಕರಣಗೊಳಿಸಲು, ನಾವೀನ್ಯತೆ, ಸಮಾನತೆ ಮತ್ತು ಅಂತರ್ಗತ ಅಭಿವೃದ್ಧಿಗೆ ಮಾದರಿಯಾಗಿ ಉಳಿಯುವ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನ ರಾಡಿಸನ್‌ ಬ್ಲೂನಲ್ಲಿ ನಡೆದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ (DDU-GKY) CXO ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಅವರು ಮಾತನಾಡಿದರು.CXO ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯು ಸಹಯೋಗದ ಕ್ರಮ, ನಾವೀನ್ಯತೆ ಮತ್ತು ಬದ್ಧತೆಯ ಮೂಲಕ ಕರ್ನಾಟಕದ ಭವಿಷ್ಯವನ್ನು ರೂಪಿಸುವ ಪ್ರಮುಖ ಅವಕಾಶ ಕಲ್ಪಿಸುವ ವೇದಿಕೆಯಾಗಿದೆ ಎಂದರು.

ನಮ್ಮ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮೂಲಕ ಗ್ರಾಮೀಣ ಯುವಕರನ್ನು ಸಬಲೀಕರಣಗೊಳಿಸುವ ಪರಿವರ್ತನಾತ್ಮಕ ಹಾದಿಯಲ್ಲಿದೆ. ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಒಂದು ಮೂಲಾಧಾರ ಮತ್ತು ಪ್ರಮುಖ ಉಪಕ್ರಮವಾಗಿದೆ. ಈ ಕಾರ್ಯಕ್ರಮವು ಗ್ರಾಮೀಣ ಯುವಜನರಿಗೆ ಜೀವನಾಡಿಯಾಗಿ ಹೊರಹೊಮ್ಮಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಉದ್ಯಮ-ಸಂಬಂಧಿತ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ಯುವಕರು ಅರ್ಥಪೂರ್ಣ ಉದ್ಯೋಗವನ್ನು ಪಡೆಯಲು ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಅವರ ಜೀವನ ಮಟ್ಟ ಸುಧಾರಿಸುತ್ತದೆ ಮತ್ತು ಗ್ರಾಮೀಣ ಬಡತನವನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸಲು, ಸುಸ್ಥಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ನಮ್ಮ ಹಳ್ಳಿಗಳಲ್ಲಿ ಆರ್ಥಿಕ ಸದೃಢತೆ ನಿರ್ಮಿಸುವ ಗುರಿ ಹೊಂದಿದೆ. ನಾವು ಕೇವಲ ಜೀವನೋಪಾಯ ನಿರ್ಮಿಸುತ್ತಿಲ್ಲ. ಕರ್ನಾಟಕಕ್ಕೆ ಉಜ್ವಲ, ಸಮಾನ ಭವಿಷ್ಯವನ್ನು ರೂಪಿಸುತ್ತಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದರು.

ನಮ್ಮ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ ಯುವನಿಧಿ. ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಆರ್ಥಿಕ ನೆರವು ನೀಡುವ ಯೋಜನೆ ಸಾವಿರಾರು ಮಂದಿಗೆ ಅನುಕೂಲವಾಗಿದೆ. ಯುವನಿಧಿ ಫಲಾನುಭವಿಗಳಿಗೆ ತರಬೇತಿ ನೀಡುವುದು ನಮ್ಮ ಪ್ರಾಥಮಿಕ ಆದ್ಯತೆಯಾಗಿದೆ ಎಂದು ಡಾ. ಪಾಟೀಲ್‌ ತಿಳಿಸಿದರು.

ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಹೊಸ ಅನ್ವೇಷಣೆ ಮಾಡೋಣ, ಮಹತ್ವಾಕಾಂಕ್ಷೆಯನ್ನು ಪೋಷಿಸೋಣ ಮತ್ತು ಕರ್ನಾಟಕದ ನಿಜವಾದ ಚೈತನ್ಯವನ್ನು ಪ್ರತಿಬಿಂಬಿಸುವ ಭವಿಷ್ಯವನ್ನು ರೂಪಿಸೋಣ ಎಂದು  ಹೇಳಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ